ಔರಾದ್ (ಬೀದರ್ ಜಿಲ್ಲೆ): ‘ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನೇಮಕಾತಿಯಲ್ಲಿ ನಡೆದ ಅಕ್ರಮ ವ್ಯವಹಾರಗಳ ಮಾಹಿತಿ ಕಲೆ ಹಾಕಲಾಗಿದ್ದು, ಎಲ್ಲ ದಾಖಲೆಗಳನ್ನು ರಾಹುಲ್ ಗಾಂಧಿ ಅವರಿಗೆ ಕಳಿಸಿಕೊಡಲಾಗುವುದು. ಅವರು ತಪ್ಪು ಮಾಡಿದವರಿಗೆ ಏನಾದರೂ ಶಿಕ್ಷೆ ಕೊಡುತ್ತಾರೆಯೇ ಎನ್ನುವುದು ನನ್ನ ನೇರ ಪ್ರಶ್ನೆಯಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಹೇಳಿದರು.