ಇದಕ್ಕೂ ಮುನ್ನ ಲಖಿಂಪುರ ಘಟನೆಗೆ ಸಂಬಂಧಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯುಳ್ಳ ವಿಡಿಯೊಗಳನ್ನು ಕಾಂಗ್ರೆಸ್ ಟ್ವೀಟ್ ಮಾಡಿತ್ತು. ಅದಕ್ಕೆ ತಿರುಗೇಟು ನೀಡಿದ್ದ ಬಿಜೆಪಿ, ನಕಲಿ ಗಾಂಧಿ ಕುಟುಂಬದವರಿಗೆ ಅನ್ನದಾತರ ನೋವಿನ ಬಗ್ಗೆ ನೈಜ ಕಾಳಜಿ ಇದೆಯೇ ಎಂದು ಪ್ರಶ್ನಿಸಿತ್ತು. ಜತೆಗೆ, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ರೈತರ ಮೇಲೆ ಪೊಲೀಸರು ಹಲ್ಲೆ ಮಾಡಿದ್ದ ವಿಡಿಯೊವನ್ನು ಟ್ವೀಟ್ ಮಾಡಿತ್ತು.