ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನರ ಬಳಿಗೆ ಓಡುವುದನ್ನು ಬಿಟ್ಟು ಬಿಜೆಪಿ ನಾಯಕರು ದೆಹಲಿಗೆ ಓಡುತ್ತಾರೆ. ಸಿಎಂ ಯಡಿಯೂರಪ್ಪ, ಮುರುಗೇಶ್ ನಿರಾಣಿ, ಕಟೀಲ್ ಎಲ್ಲರೂ ದೆಹಲಿಗೆ ದೌಡಾಯಿಸುತ್ತಿದ್ದಾರೆ. ಕೊರೊನಾ ಹೆಚ್ಚಾಗುತ್ತಿದೆ. ಅದರ ಬಗ್ಗೆ ಯಾರಿಗೂ ಗಮನವಿಲ್ಲ ಎಂದು ಟೀಕಿಸಿ ರಾಜ್ಯ ಕಾಂಗ್ರೆಸ್ ಮಾಡಿದ್ದ ಟ್ವೀಟ್ಗೆ ಪ್ರತಿಯಾಗಿ ಬಿಜೆಪಿ ಈ ಟ್ವೀಟಾಸ್ತ್ರ ಪ್ರಯೋಗಿಸಿದೆ.
ಸಿದ್ದರಾಮಯ್ಯ ಈಗ ತೆರೆಮರೆಯ ಆಟ ಆರಂಭಿಸಿದ್ದಾರೆ! ರಾಹುಲ್ ಗಾಂಧಿ ಜೊತೆಗಿನ ರಹಸ್ಯ ಮಾತುಕತೆಯ ಅರ್ಥ ಡಿ.ಕೆ. ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವುದೇ? ಎಂದು ಬಿಜೆಪಿ ಪ್ರಶ್ನಿಸಿದೆ.