ಮಂಗಳವಾರ, ಮಾರ್ಚ್ 28, 2023
31 °C

ಬಿಜೆಪಿ ಎಂದರೆ ಯೋಜನೆ, ಯೋಚನೆ ಇಲ್ಲದ ಗಾಂಪರ ಗುಂಪು: ಕಾಂಗ್ರೆಸ್ ಲೇವಡಿ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಜೆಪಿ ಎಂದರೆ ಯೋಜನೆ ಮತ್ತು ಯೋಚನೆ ಇಲ್ಲದ ಗಾಂಪರ ಗುಂಪು ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

ಉದ್ಯೋಗ ಸೃಷ್ಟಿಗಿಂತಲೂ ಕೌಶಲ ತರಬೇತಿಗೆ ಒತ್ತು ನೀಡುವುದಾಗಿ ಕೌಶಲಾಭಿವೃದ್ಧಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ನೀಡಿರುವ ಹೇಳಿಕೆಯ ‘ಪ್ರಜಾವಾಣಿ ವರದಿ’ಯನ್ನು ಉಲ್ಲೇಖಿಸಿ ಕಾಂಗ್ರೆಸ್ ಟ್ವೀಟ್ ಮಾಡಿದೆ.

ಓದಿ: ಉದ್ಯೋಗ ಸೃಷ್ಟಿಗಲ್ಲ, ಕೌಶಲ ತರಬೇತಿಗೆ ಒತ್ತು: ಅಶ್ವತ್ಥನಾರಾಯಣ

‘ಬಿಜೆಪಿ ಎಂದರೆ ಯೋಜನೆ ಹಾಗೂ ಯೋಚನೆ ಇಲ್ಲದ ಗಾಂಪರ ಗುಂಪು ಎಂಬುದು ಸ್ಪಷ್ಟ! ಉದ್ಯೋಗ ಸೃಷ್ಟಿಗೆ ಕ್ರಮ ವಹಿಸದೆ ಕೇವಲ ಕೌಶಲ್ಯ ತರಬೇತಿ ನೀಡಿ ಕೌಶಲ್ಯಯುತ ನಿರುದ್ಯೋಗಿಗಳನ್ನು ಸೃಷ್ಟಿಸುವಿರಾ ಅಶ್ವತ್ಥನಾರಾಯಣ ಅವರೇ? ಉದ್ಯೋಗ ಸೃಷ್ಟಿಯಲ್ಲಿ ರಾಜ್ಯ ಹಿಂದುಳಿದಿದ್ದರೂ ಕ್ರಮವಹಿಸದೆ ಯುವ ಸಮುದಾಯದ ಬದುಕನ್ನು ಕತ್ತಲೆಗೆ ತಳ್ಳಲಾಗುತ್ತಿದೆ’ ಎಂದು ಕಾಂಗ್ರೆಸ್ ಟೀಕಿಸಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು