ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಪೇ ಸಿಎಂ' ಘೋಷಣೆಯ ಭಿತ್ತಿಪತ್ರ ಮತ್ತು ಕ್ಯೂ ಆರ್ ಕೋಡ್ ಸಹಿತ ಕಾಂಗ್ರೆಸ್ ಅಭಿಯಾನ

Last Updated 21 ಸೆಪ್ಟೆಂಬರ್ 2022, 11:13 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ 'ಶೇ 40 ಕಮಿಷನ್ ಸರ್ಕಾರ'ವೆಂದು ಆರೋಪಿಸಿ 'ಪೇ ಸಿಎಂ' (PayCM) ಘೋಷಣೆಯ ಭಿತ್ತಿಪತ್ರ ಮತ್ತು ಕ್ಯೂ ಆರ್ ಕೋಡ್ ಸಹಿತ ಕಾಂಗ್ರೆಸ್ ಪಕ್ಷ ಅಭಿಯಾನ ಆರಂಭಿಸಿದೆ.

ಬೆಂಗಳೂರು ನಗರದ ವಿವಿಧೆಡೆ ಮುಖ್ಯಮಂತ್ರಿ ಚಿತ್ರ ಸಹಿತ ಈ ಭಿತ್ತಿಪತ್ರಗಳನ್ನು ಅಂಟಿಸಲಾಗಿದೆ.

ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿದರೆ ರಾಜ್ಯ ಸರ್ಕಾರದ ವಿರುದ್ಧದ ದೂರುಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಘಟಕ ಇತ್ತೀಚೆಗೆ ಬಿಡುಗಡೆ ಮಾಡಿದ 'ಶೇ 40 ಕಮಿಷನ್ ಸರ್ಕಾರ' ವೆಬ್ ಸೈಟ್ ತೆರೆದುಕೊಳ್ಳಲಿದೆ.

ಈ ಮಧ್ಯೆ, ವಿಧಾನಸಭೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ 'ಶೇ 40 ಕಮಿಷನ್ ಸರ್ಕಾರ' ಎಂದು ಆರೋಪಿಸಿ ನಿಲುವಳಿ ಸೂಚನೆ ಮಂಡಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT