ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದಿಂದ ಅವಹೇಳನಕಾರಿ ಟ್ವೀಟ್ ಆಗಿರುವುದರ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿಷಾದ ವ್ಯಕ್ತಪಡಿಸಿದ್ದಾರೆ.
‘ಈ ಟ್ವೀಟ್ ತಕ್ಷಣ ತೆಗೆದುಹಾಕಲು ಸೂಚನೆ ನೀಡಲಾಗಿದೆ. ಈ ಅಚಾತುರ್ಯಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ’ ಎಂದು ಅವರು ಸೋಮವಾರ ರಾತ್ರಿ ತಿಳಿಸಿದ್ದಾರೆ.
‘ಇಂತಹ ಪ್ರಮಾದವನ್ನು ಕಾಂಗ್ರೆಸ್ ಎಂದಿಗೂ ಸಹಿಸುವುದಿಲ್ಲ’ ಎಂದೂ ಅವರು ತಿಳಿಸಿದ್ದಾರೆ.