‘ಕಚ್ಛಾ ತೈಲದ ಬೆಲೆ ಕಡಿಮೆಯಿದ್ದಾಗಲೇ ಪೆಟ್ರೋಲ್ ಬೆಲೆ 100 ರೂ. ದಾಟಿತ್ತು. ಈಗ ರಷ್ಯಾ- ಉಕ್ರೇನ್ ಯುದ್ಧದ ಕಾರಣವನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಸಿಮೆಂಟ್, ಕಬ್ಬಿಣ, ಅಡುಗೆ ಎಣ್ಣೆ, ಇಂಧನದ ಬೆಲೆ ನಿರಂತರವಾಗಿ ಏರುತ್ತಿದೆ. ಲೂಟಿಕೋರ ಸರ್ಕಾರದ ವಿರುದ್ಧ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಪಕ್ಷ ತೀರ್ಮಾನಿಸಿದೆ’ ಎಂದು ಅವರು ಹೇಳಿದ್ದಾರೆ