ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, 'ರೈತವಿರೋಧಿ ಕೃಷಿ ಕಾಯ್ದೆಗಳ ವಿರೋಧಿ ಪ್ರತಿಭಟನೆಗೆ 10 ತಿಂಗಳು ಕಳೆದಿವೆ. ಇಷ್ಟು ದಿನಗಳಲ್ಲಿ ಪ್ರತಿಭಟನೆಯನ್ನು ಹತ್ತಿಕ್ಕಲು, ದಿಕ್ಕು ತಪ್ಪಿಸಲು, ಅಪರಾಧಿಗಳನ್ನಾಗಿಸಲು ಬಿಜೆಪಿ ಹಲವು ಕಸರತ್ತು ನಡೆಸಿತ್ತು. ಈಗ ಸ್ವತಃ ಕೇಂದ್ರ ಸಚಿವರೇ ಕಾರು ಹರಿಸಿ ರೈತರನ್ನು ಕೊಲೆ ಮಾಡಲು ಮುಂದಾಗಿದ್ದಾರೆ. ಬಿಜೆಪಿ ಕೊಲೆಗಡುಕರ ಪಕ್ಷ ಎಂದರೆ ತಪ್ಪಾಗದು' ಎಂದಿದೆ.