ರಾಮನಗರದ ಜಿಲ್ಲಾ ಕಚೇರಿಗಳ ಸಂಕೀರ್ಣದ ಮುಂಭಾಗ, ಪ್ರತಿಮೆಗಳ ಅನಾವರಣ ಹಾಗೂ ವಿವಿಧ ಕಾಮಗಾರಿಗಳಿಗೆ ಚಾಲನೆ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಸಚಿವ ಅಶ್ವತ್ಥ ನಾರಾಯಣರ ಮಾತುಗಳಿಂದ ಆಕ್ರೋಶಗೊಂಡ ಸಂಸದ ಸುರೇಶ್, ಸಚಿವರತ್ತ ತೆರಳಿದರು. ಅತ್ತ ಅಶ್ವತ್ಥ ನಾರಾಯಣ ಅವರೂ ಕೆರಳಿದರು. ಈ ವೇಳೆ ಇಬ್ಬರು ಕೈ ಕೈ ಮಿಲಾಯಿಸಲು ಮುಂದಾದರು. ಇದರ ಮಧ್ಯೆ ವಿಧಾನ ಪರಿಷತ್ ಸದಸ್ಯ ಎಸ್. ರವಿ ಮೈಕ್ನಲ್ಲಿ ಮಾತನಾಡಲು ಮುಂದಾದರು. ಇದಕ್ಕೆ ಅಶ್ವತ್ಥನಾರಾಯಣ ಅವಕಾಶ ನೀಡದಿದ್ದಾಗ, ರವಿ ಕೋಪದಿಂದ ಮೈಕ್ ಕಿತ್ತೆಸೆದರು. ಇದರಿಂದ ಪರಿಸ್ಥಿತಿ ಇನ್ನಷ್ಟು ವಿಕೋಪಕ್ಕೆ ಹೋಯಿತು.