‘ರೈತ ವಿರೋಧಿ ಬಿಜೆಪಿ ಸರ್ಕಾರ ರೈತರಿಗೆ ಮೇಲಿಂದ ಮೇಲೆ ಅನ್ಯಾಯವೆಸಗುತ್ತಿದೆ. ನೆರೆ ಪರಿಹಾರವಿಲ್ಲ, ಗೊಬ್ಬರವೂ ಸಿಗುತ್ತಿಲ್ಲ, ಬೆಳೆ ಸಾಲಕ್ಕೂ ಪರದಾಟ, ಸಾಲದ ಮೇಲಿನ ಬಡ್ಡಿಯೂ ದುಬಾರಿ. ಬಿಜೆಪಿಗೆ ರೈತರ ಮೇಲಿರುವುದು ದ್ವೇಷವೇ, ತಾತ್ಸಾರವೇ? ಹೆಣ ಕಂಡರೆ ಓಡೋಡಿ ಬರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಮಸ್ಯೆಗಳಿಗೆ ಬಾಯಿ ಬಿಡದಿರುವುದೇಕೆ?’ ಎಂದು ಟ್ವೀಟ್ನಲ್ಲಿ ಕಾಂಗ್ರೆಸ್ ಉಲ್ಲೇಖಿಸಿದೆ.