ಮುಖ್ಯಮಂತ್ರಿಗಳ ದೆಹಲಿ ಪ್ರವಾಸದ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್‘ ದೆಹಲಿ ಟೂರಿಸ್ಟ್ ಬಸವರಾಜ ಬೊಮ್ಮಾಯಿ ಅವರನ್ನು ಹೈಕಮಾಂಡ್ ನಾಯಕರು ಭೇಟಿ ಮಾಡಲು ಸತಾಯಿಸುತ್ತಿರುವುದು ನೋಡಿ ಆಯ್ಯೋ ಪಾಪ ಎನಿಸುತ್ತಿದೆ. ಇದುವರೆಗೂ 12 ಬಾರಿ ದೆಹಲಿ ಭೇಟಿ ಮಾಡಿದರೂ ರಾಜ್ಯಕ್ಕೆ ನಯಾಪೈಸೆ ಪ್ರಯೋಜನವಾಗಿಲ್ಲ, ಈಗಲೂ ಆಗುವುದಿಲ್ಲ. ಬೊಮ್ಮಾಯಿಯವರ ಸಂಕಟ ವಿಸ್ತರಣೆಯಾಗುತ್ತಿದೆಯೇ ಹೊರತು ಸಂಪುಟ ವಿಸ್ತರಣೆಯಲ್ಲ‘ ಎಂದು ಕಾಂಗ್ರೆಸ್ ಕುಹಕವಾಡಿದೆ.