ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಾಂಗ್ರೆಸ್ನ ಕರ್ನಾಟಕ ಘಟಕವು ಟ್ವಿಟರ್ನಲ್ಲಿ ಟೀಕಾ ಪ್ರಹಾರ ಮುಂದುವರಿಸಿದೆ.
ಬೆಲೆ ಏರಿಕೆ, ಭ್ರಷ್ಟಾಚಾರ ಸೇರಿದಂತೆ ವಿವಿಧ ವಿಷಯಗಳನ್ನು ಪ್ರಸ್ತಾಪಿಸಿ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ‘ಹೆಬ್ಬೆಟ್ಟು ಗಿರಾಕಿ ಮೋದಿ’ಯಿಂದ ದೇಶ ನರಳುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದೆ.
‘ಕಾಂಗ್ರೆಸ್ ಶಾಲೆಗಳನ್ನು ಕಟ್ಟಿಸಿತ್ತು, ಆದರೂ ಮೋದಿ ಓದಲಿಲ್ಲ, ವಯಸ್ಕರ ಶಿಕ್ಷಣ ಯೋಜನೆಯನ್ನೂ ಮಾಡಿತ್ತು ಆದರೂ ಓದಲಿಲ್ಲ. ಭಿಕ್ಷಾಟನೆ ನಿಷೇಧವಿದ್ದರೂ ಭಿಕ್ಷೆ ಬೇಡುವ ಸೋಂಬೇರಿ ಜೀವನದ ಗೀಳಿಗೆ ಬಿದ್ದವರು ಇಂದು ದೇಶವಾಸಿಗಳನ್ನು ಬಿಕ್ಷುಕರನ್ನಾಗಿಸಿದ್ದಾರೆ’ ಎಂದು ಕಾಂಗ್ರೆಸ್ ಕುಹಕವಾಡಿದೆ.
ಕಾಂಗ್ರೆಸ್ ಶಾಲೆಗಳನ್ನು ಕಟ್ಟಿಸಿತ್ತು, ಆದರೂ @narendramodi ಓದಲಿಲ್ಲ, ವಯಸ್ಕರ ಶಿಕ್ಷಣ ಯೋಜನೆಯನ್ನೂ ಮಾಡಿತ್ತು ಆದರೂ ಓದಲಿಲ್ಲ,
— Karnataka Congress (@INCKarnataka) October 18, 2021
ಭಿಕ್ಷಾಟನೆ ನಿಷೇಧವಿದ್ದರೂ ಭಿಕ್ಷೆ ಬೇಡುವ ಸೋಂಬೇರಿ ಜೀವನದ ಗೀಳಿಗೆ ಬಿದ್ದವರು ಇಂದು ದೇಶವಾಸಿಗಳನ್ನು ಬಿಕ್ಷುಕರನ್ನಾಗಿಸಿದ್ದಾರೆ.#ಹೆಬ್ಬೆಟ್ಟುಗಿರಾಕಿಮೋದಿ ಯಿಂದ ದೇಶ ನರಳುತ್ತಿದೆ.
‘ಕಾಂಗ್ರೆಸ್ ಸರ್ಕಾರ ಇದ್ದಿದ್ದರೆ ಇಂದು ಪೆಟ್ರೋಲ್ ₹66, ಡೀಸೆಲ್ ₹55ಕ್ಕೆ ದೊರೆಯುತ್ತಿತ್ತು. ಜನರನ್ನು ದೋಚಿ, ಉದ್ಯಮಿಗಳ ಹೊಟ್ಟೆ ತುಂಬಿಸುವ ಯೋಜನೆ ಹೊಂದಿರುವ ಬಿಜೆಪಿ ಸರ್ಕಾರದ ತೆರಿಗೆ ಭಯೋತ್ಪಾದನೆಯಿಂದ ಎಲ್ಲಾ ಅಗತ್ಯ ವಸ್ತುಗಳು ದುಬಾರಿಯಾಗಿವೆ. ಜನರ ಕಷ್ಟಗಳನ್ನು ತಿಳಿಯದ ಮೋದಿಯಿಂದ ದೇಶ ನಲುಗುತ್ತಿದೆ. ವಾಸ್ತವಗಳ ಬಗ್ಗೆ ಮಾತನಾಡದ ಪ್ರಧಾನಿ ತಮ್ಮ ಹೆಸರನ್ನು 'ಮೌನೇಂದ್ರ ಮೋದಿ' ಎಂದು ಬದಲಿಸಿಕೊಳ್ಳಲಿ’ ಎಂದು ಟ್ವೀಟ್ನಲ್ಲಿ ಉಲ್ಲೇಖಿಸಲಾಗಿದೆ.
‘ಅದೇನು ಮಾಯವೋ! ಅತ್ಯಾಚಾರಿ ಬಾಬಾಗಳು, ಡ್ರಗ್ಸ್ ದಂಧೆಕೋರರು, ವಂಚಕರು ಎಲ್ಲರಿಗೂ ಮೋದಿಯೊಂದಿಗೆ ನಂಟಿರುತ್ತದೆ. ಅವರೆಲ್ಲರ ಹಗರಣದಲ್ಲಿ ಮೋದಿಯ ಪಾಲೆಷ್ಟು? ಅದಾನಿ ಪೋರ್ಟ್ ಡ್ರಗ್ಸ್ ಪ್ರಕರಣದಲ್ಲಿ ಮೋದಿಗೆ ಸಿಕ್ಕ ಕಿಕ್ ಬ್ಯಾಕ್ ಎಷ್ಟು? ಬಸ್ ಡ್ರೈವರ್ ಉಮೇಶನ ಲೂಟಿಯಲ್ಲಿ ಬಿಜೆಪಿ ನಾಯಕರಿಗಾದ ಹಂಚಿಕೆ ಎಷ್ಟು’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
‘ಟೆಲಿಪ್ರಾಂಪ್ಟರ್ ಇಲ್ಲದೆ ಮಾತೇ ಹೊರಡುವುದಿಲ್ಲ. ವಿದೇಶಾಂಗ ವ್ಯವಹಾರಗಳಲ್ಲಿ ಭಾಷಾಂತರಕಾರರಿಲ್ಲದೆ ಆಟವೇ ನಡೆಯುವುದಿಲ್ಲ. ವಿದ್ಯಾಭ್ಯಾಸ ಬಿಟ್ಟು ಭಿಕ್ಷೆ ಬೇಡಿದವನಿಗೆ ಆರ್ಥಿಕತೆಯ ಗಂಧಗಾಳಿಯೇ ತಿಳಿದಿಲ್ಲ. ಬಟ್ಟೆ ಶೋಕಿ, ಬಿಟ್ಟಿ ಪ್ರಚಾರ, ಸುಳ್ಳಿನ ಭಾಷಣಗಳೇ ಅವರ ಬಂಡವಾಳ!’ ಎಂದು ಮತ್ತೊಂದು ಟ್ವೀಟ್ನಲ್ಲಿ ಪ್ರಸ್ತಾಪಿಸಿದೆ.
‘ಮೋದಿ ಅವರು ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ವಿಮಾನಗಳ ಮುಂದೆ ಬೈಕು, ಕಾರುಗಳಿಗೆ ‘ಮಾನ’ ತಂದುಕೊಟ್ಟರು. ಬಹುಶಃ ಬಿಜೆಪಿಗರು ‘ಮೋದಿ ಹೈ ತೊ ಮುಮ್ಕಿನ್ ಹೈ (ಮೋದಿ ಇದ್ದರೆ ಎಲ್ಲವೂ ಸಾಧ್ಯ)’ ಎನ್ನುವುದು ಇದಕ್ಕಾಗಿಯೇ ಇರಬಹುದು!ಹಾರಾಟಕ್ಕಿಂತ ಸಾಗಾಟವನ್ನು ದುಬಾರಿ ಮಾಡಿದ್ದಕ್ಕಾಗಿ ಧನ್ಯವಾದಗಳು ಮೋದಿ ಜೀ ಎನ್ನುವುದಿಲ್ಲವೇ’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಕಾಂಗ್ರೆಸ್ ಟ್ವೀಟ್ಗಳು
ವಾಸ್ತವಗಳ ಬಗ್ಗೆ ಮಾತನಾಡದ ಪ್ರಧಾನಿ ತಮ್ಮ ಹೆಸರನ್ನು 'ಮೌನೇಂದ್ರ ಮೋದಿ' ಎಂದು ಬದಲಿಸಿಕೊಳ್ಳಲಿ.
— Karnataka Congress (@INCKarnataka) October 18, 2021
◆ಬೆಲೆ ಏರಿಕೆಯ ಬಗ್ಗೆ -ಮೌನ
◆ಕಾಶ್ಮೀರದ ದಳ್ಳುರಿಗೆ -ಮೌನ
◆ಚೀನಾ ಅತಿಕ್ರಮಣಕ್ಕೆ -ಮೌನ
◆ರೈತರ ಹತ್ಯೆಗೆ -ಮೌನ
◆ಅದಾನಿ ಡ್ರಗ್ಸ್ ದಂಧೆಯ ಬಗ್ಗೆ -ಮೌನ
◆ನಿರುದ್ಯೋಗದ ಬಗ್ಗೆ -ಮೌನ
◆ಪತ್ರಿಕಾಗೋಷ್ಠಿಗೆ -ಮೌನ#ಹೆಬ್ಬೆಟ್ಗಿರಾಕಿಮೋದಿ
ಅದೇನು ಮಾಯವೋ!
— Karnataka Congress (@INCKarnataka) October 18, 2021
ಅತ್ಯಾಚಾರಿ ಬಾಬಾಗಳು, ಡ್ರಗ್ಸ್ ದಂಧೆಕೋರರು, ವಂಚಕರು ಎಲ್ಲರಿಗೂ ಮೋದಿಯೊಂದಿಗೆ ನಂಟಿರುತ್ತದೆ.
ಅವರೆಲ್ಲರ ಹಗರಣದಲ್ಲಿ #ಹೆಬ್ಬೆಟ್ಗಿರಾಕಿಮೋದಿ ಯ ಪಾಲೆಷ್ಟು?
ಅದಾನಿ ಪೋರ್ಟ್ ಡ್ರಗ್ಸ್ ಪ್ರಕರಣದಲ್ಲಿ ಮೋದಿಗೆ ಸಿಕ್ಕ ಕಿಕ್ ಬ್ಯಾಕ್ ಎಷ್ಟು?
ಬಸ್ ಡ್ರೈವರ್ ಉಮೇಶನ ಲೂಟಿಯಲ್ಲಿ @BJP4Karnataka ನಾಯಕರಿಗಾದ ಹಂಚಿಕೆ ಎಷ್ಟು? pic.twitter.com/a4nSL0IkcE
👉 ಇಂಧನ ತೈಲಗಳಲ್ಲಿ ಏರಿದ ಸರಕಾರದ ಆದಾಯ.
— Karnataka Congress (@INCKarnataka) October 18, 2021
2014 = ರೂ. 75 ಸಾವಿರ ಕೋಟಿ
2021 = ರೂ. 3.25 ಲಕ್ಷ ಕೋಟಿ.
👉ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಕುಸಿತ.
2014ರಲ್ಲಿ- 55
2021ರಲ್ಲಿ - 101
ಸರ್ಕಾರದ ಆದಾಯ ಹೆಚ್ಚಿದಂತೆ, ಭಾರತದಲ್ಲಿ ಬಡತನವೂ ಹೆಚ್ಚುತ್ತಿದೆ.#ಹೆಬ್ಬೆಟ್ಗಿರಾಕಿಮೋದಿ ಸರ್ಕಾರದ ಆದಾಯವನ್ನು ಯಾರ ಜೇಬಿಗೆ ತುಂಬುತ್ತಿದ್ದಾರೆ?
ಟೆಲಿಪ್ರಾಂಪ್ಟರ್ ಇಲ್ಲದೆ ಮಾತೇ ಹೊರಡುವುದಿಲ್ಲ!
— Karnataka Congress (@INCKarnataka) October 18, 2021
ವಿದೇಶಾಂಗ ವ್ಯವಹಾರಗಳಲ್ಲಿ ಭಾಷಾಂತರಕಾರರಿಲ್ಲದೆ ಆಟವೇ ನಡೆಯುವುದಿಲ್ಲ!
ವಿದ್ಯಾಭ್ಯಾಸ ಬಿಟ್ಟು ಭಿಕ್ಷೆ ಬೇಡಿದವನಿಗೆ ಆರ್ಥಿಕತೆಯ ಗಂಧಗಾಳಿಯೇ ತಿಳಿದಿಲ್ಲ!
ಬಟ್ಟೆ ಶೋಕಿ, ಬಿಟ್ಟಿ ಪ್ರಚಾರ, ಸುಳ್ಳಿನ ಭಾಷಣಗಳೇ ಅವರ ಬಂಡವಾಳ!#ಹೆಬ್ಬೆಟ್ಗಿರಾಕಿಮೋದಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.