<p><strong>ಬೆಂಗಳೂರು:</strong> ವಿಧಾನ ಪರಿಷತ್ನ ಶಿಕ್ಷಕರ ಹಾಗೂ ಪದವೀಧರರ ತಲಾ ಎರಡು ಕ್ಷೇತ್ರಗಳು ಜೂನ್ಗೆ ತೆರವಾಗಲಿವೆ. ಪಶ್ಚಿಮ ಶಿಕ್ಷಕರ ಕ್ಷೇತ್ರದ ಹಾಲಿ ಸದಸ್ಯರಾಗಿರುವ ಸಭಾಪತಿ ಬಸವರಾಜ ಹೊರಟ್ಟಿ ಜೆಡಿಎಸ್ ತೊರೆದು ಬಿಜೆಪಿಯಿಂದ ಸ್ಪರ್ಧಿಸುವುದಾಗಿ ಪ್ರಕಟಿಸಿರುವುದರಿಂದ ಚುನಾವಣಾ ರಾಜಕಾರಣ ಮತ್ತಷ್ಟು ಗರಿಗೆದರಿದೆ.</p>.<p>ವಾಯವ್ಯ ಮತ್ತು ದಕ್ಷಿಣ ಪದವೀಧರ ಕ್ಷೇತ್ರಗಳು, ವಾಯವ್ಯ ಮತ್ತು ಪಶ್ಚಿಮ ಶಿಕ್ಷಕರ ಕ್ಷೇತ್ರಗಳು ಜುಲೈ 4 ಕ್ಕೆ ತೆರವಾಗಲಿವೆ. ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ಹಾಲಿ ಸದಸ್ಯ ಅರುಣ ಶಹಾಪುರ, ವಾಯುವ್ಯ ಪದವೀಧರ ಕ್ಷೇತ್ರದಲ್ಲಿ ಹಾಲಿ ಸದಸ್ಯ ಹಣಮಂತ ಆರ್. ನಿರಾಣಿ ಮತ್ತು ದಕ್ಷಿಣ ಪದವೀಧರ ಕ್ಷೇತ್ರಕ್ಕೆ ಎಂ.ವಿ. ಶಿವಶಂಕರ್ ಅವರನ್ನು ಕಣಕ್ಕಿಳಿಸುವುದಾಗಿ ಬಿಜೆಪಿ ಘೋಷಿಸಿತ್ತು.</p>.<p><a href="https://www.prajavani.net/district/dharwad/bjp-leader-mohan-limbikayi-lashes-at-basavaraj-horatti-925074.html" itemprop="url">ಸೋಲುವ ಭೀತಿಯಿಂದ ಹೊರಟ್ಟಿ ಬಿಜೆಪಿ ಸೇರುವ ತಂತ್ರ: ಮೋಹನ್ ಲಿಂಬಿಕಾಯಿ </a></p>.<p>ಬಸವರಾಜ ಹೊರಟ್ಟಿ ಬಿಜೆಪಿ ಸೇರಿ, ಮುಂದಿನ ಚುನಾವಣೆ ಎದುರಿಸಲು ಬಯಸಿದ್ದರು. ಈ ಕಾರಣಕ್ಕಾಗಿಯೇ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯನ್ನು ಪ್ರಕಟಿಸಿರಲಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ನಡೆದ ಬಿಜೆಪಿ ರಾಜ್ಯ ಪ್ರಮುಖರ ಸಮಿತಿ ಸಭೆಯಲ್ಲಿ ಹೊರಟ್ಟಿ ಸೇರ್ಪಡೆ ಕುರಿತು ಚರ್ಚೆ ನಡೆದಿದೆ.</p>.<p>ಅಮಿತ್ ಶಾ ಸೇರಿದಂತೆ ಬಿಜೆಪಿಯ ವರಿಷ್ಠರು ಸೇರ್ಪಡೆಗೆ ಸಮ್ಮತಿ ಸೂಚಿಸಿದ್ದಾರೆ. ಆ ಬಳಿಕ ಹೊರಟ್ಟಿ ಅವರೇ ಬಿಜೆಪಿ ಸೇರ್ಪಡೆಯನ್ನು ಬಹಿರಂಗಪಡಿಸಿದ್ದಾರೆ.</p>.<p>ವಿಧಾನ ಪರಿಷತ್ನ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ ಸೇರಿದಂತೆ ಹಲವರು ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಿಜೆಪಿ ಟಿಕೆಟ್ಗಾಗಿ ಪೈಪೋಟಿಯಲ್ಲಿದ್ದರು. ಏಳು ಬಾರಿ ಸತತವಾಗಿ ಈ ಕ್ಷೇತ್ರದಿಂದ ಆಯ್ಕೆಯಾಗಿರುವ ಬಸವರಾಜ ಹೊರಟ್ಟಿ ಅವರನ್ನು ಪಕ್ಷಕ್ಕೆ ಸೆಳೆದುಕೊಂಡು ಟಿಕೆಟ್ ನೀಡುವ ತೀರ್ಮಾನವನ್ನು ಬಿಜೆಪಿ ವರಿಷ್ಠರು ಮಾಡಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.</p>.<p><a href="https://www.prajavani.net/district/dharwad/karnataka-legislative-council-speaker-basavaraj-horatti-announces-to-join-bjp-soon-925014.html" itemprop="url" target="_blank">ಶೀಘ್ರದಲ್ಲೇ ಬಿಜೆಪಿ ಸೇರ್ಪಡೆ: ಬಸವರಾಜ ಹೊರಟ್ಟಿ ಘೋಷಣೆ</a></p>.<p>ಎರಡು ಕ್ಷೇತ್ರ ಬಾಕಿ: ಕಾಂಗ್ರೆಸ್ ದಕ್ಷಿಣ ಪದವೀಧರ ಕ್ಷೇತ್ರ ಮತ್ತು ಪಶ್ಚಿಮ ಶಿಕ್ಷಕರ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದ್ದು, ಉಳಿದ ಎರಡು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಬಾಕಿ ಇದೆ.</p>.<p>ದಕ್ಷಿಣ ಪದವೀಧರ ಕ್ಷೇತ್ರಕ್ಕೆ ಪರಿಷತ್ನ ಮಾಜಿ ಸದಸ್ಯ ಮಧು ಜಿ. ಮಾದೇಗೌಡ ಹಾಗೂ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಬಸವರಾಜ ಗುರಿಕಾರ ಅವರಿಗೆ ಟಿಕೆಟ್ ಘೋಷಿಸಲಾಗಿದೆ. ವಾಯವ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಅಭ್ಯರ್ಥಿಗಳ<br />ಆಯ್ಕೆಗೆ ಹಲವು ಸುತ್ತಿನ ಸಭೆ ನಡೆಸಿರುವ ಕೆಪಿಸಿಸಿ ಪ್ರಮುಖರು, ಸಂಭವನೀಯರ ಪಟ್ಟಿಯನ್ನು ಎಐಸಿಸಿಗೆ ಕಳುಹಿಸಿದ್ದಾರೆ.</p>.<p>ಜೆಡಿಎಸ್ ದಕ್ಷಿಣ ಪದವೀಧರ ಕ್ಷೇತ್ರದ ಹಾಲಿ ಸದಸ್ಯ ಕೆ.ಟಿ. ಶ್ರೀಕಂಠೇಗೌಡ ಬದಲಾಗಿ ಎಚ್.ಕೆ. ರಾಮು ಅವರಿಗೆ ಟಿಕೆಟ್ ಘೋಷಿಸಿದೆ. ಉಳಿದ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಇನ್ನೂ ಅಂತಿಮಗೊಂಡಿಲ್ಲ.</p>.<p>ಅಲ್ಲದೆ, ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ಆಯ್ಕೆ ಆಗಿರುವ ಆರ್.ಬಿ.ತಿಮ್ಮಾಪೂರ, ಅಲ್ಲಂ ವೀರಭದ್ರಪ್ಪ, ಎಸ್.ವೀಣಾ ಅಚ್ಚಯ್ಯ, ಕೆ.ವಿ.ನಾರಾಯಣಸ್ವಾಮಿ, ಲೆಹರ್ ಸಿಂಗ್ ಸಿರೋಯಾ, ಎಚ್.ಎಂ.ರಮೇಶ್ ಗೌಡ ಮತ್ತು ಲಕ್ಷ್ಮಣ ಸವದಿ ಅವರ ಅವಧಿ ಜೂನ್ 14 ಕ್ಕೆ ಮುಗಿಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಿಧಾನ ಪರಿಷತ್ನ ಶಿಕ್ಷಕರ ಹಾಗೂ ಪದವೀಧರರ ತಲಾ ಎರಡು ಕ್ಷೇತ್ರಗಳು ಜೂನ್ಗೆ ತೆರವಾಗಲಿವೆ. ಪಶ್ಚಿಮ ಶಿಕ್ಷಕರ ಕ್ಷೇತ್ರದ ಹಾಲಿ ಸದಸ್ಯರಾಗಿರುವ ಸಭಾಪತಿ ಬಸವರಾಜ ಹೊರಟ್ಟಿ ಜೆಡಿಎಸ್ ತೊರೆದು ಬಿಜೆಪಿಯಿಂದ ಸ್ಪರ್ಧಿಸುವುದಾಗಿ ಪ್ರಕಟಿಸಿರುವುದರಿಂದ ಚುನಾವಣಾ ರಾಜಕಾರಣ ಮತ್ತಷ್ಟು ಗರಿಗೆದರಿದೆ.</p>.<p>ವಾಯವ್ಯ ಮತ್ತು ದಕ್ಷಿಣ ಪದವೀಧರ ಕ್ಷೇತ್ರಗಳು, ವಾಯವ್ಯ ಮತ್ತು ಪಶ್ಚಿಮ ಶಿಕ್ಷಕರ ಕ್ಷೇತ್ರಗಳು ಜುಲೈ 4 ಕ್ಕೆ ತೆರವಾಗಲಿವೆ. ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ಹಾಲಿ ಸದಸ್ಯ ಅರುಣ ಶಹಾಪುರ, ವಾಯುವ್ಯ ಪದವೀಧರ ಕ್ಷೇತ್ರದಲ್ಲಿ ಹಾಲಿ ಸದಸ್ಯ ಹಣಮಂತ ಆರ್. ನಿರಾಣಿ ಮತ್ತು ದಕ್ಷಿಣ ಪದವೀಧರ ಕ್ಷೇತ್ರಕ್ಕೆ ಎಂ.ವಿ. ಶಿವಶಂಕರ್ ಅವರನ್ನು ಕಣಕ್ಕಿಳಿಸುವುದಾಗಿ ಬಿಜೆಪಿ ಘೋಷಿಸಿತ್ತು.</p>.<p><a href="https://www.prajavani.net/district/dharwad/bjp-leader-mohan-limbikayi-lashes-at-basavaraj-horatti-925074.html" itemprop="url">ಸೋಲುವ ಭೀತಿಯಿಂದ ಹೊರಟ್ಟಿ ಬಿಜೆಪಿ ಸೇರುವ ತಂತ್ರ: ಮೋಹನ್ ಲಿಂಬಿಕಾಯಿ </a></p>.<p>ಬಸವರಾಜ ಹೊರಟ್ಟಿ ಬಿಜೆಪಿ ಸೇರಿ, ಮುಂದಿನ ಚುನಾವಣೆ ಎದುರಿಸಲು ಬಯಸಿದ್ದರು. ಈ ಕಾರಣಕ್ಕಾಗಿಯೇ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯನ್ನು ಪ್ರಕಟಿಸಿರಲಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ನಡೆದ ಬಿಜೆಪಿ ರಾಜ್ಯ ಪ್ರಮುಖರ ಸಮಿತಿ ಸಭೆಯಲ್ಲಿ ಹೊರಟ್ಟಿ ಸೇರ್ಪಡೆ ಕುರಿತು ಚರ್ಚೆ ನಡೆದಿದೆ.</p>.<p>ಅಮಿತ್ ಶಾ ಸೇರಿದಂತೆ ಬಿಜೆಪಿಯ ವರಿಷ್ಠರು ಸೇರ್ಪಡೆಗೆ ಸಮ್ಮತಿ ಸೂಚಿಸಿದ್ದಾರೆ. ಆ ಬಳಿಕ ಹೊರಟ್ಟಿ ಅವರೇ ಬಿಜೆಪಿ ಸೇರ್ಪಡೆಯನ್ನು ಬಹಿರಂಗಪಡಿಸಿದ್ದಾರೆ.</p>.<p>ವಿಧಾನ ಪರಿಷತ್ನ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ ಸೇರಿದಂತೆ ಹಲವರು ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಿಜೆಪಿ ಟಿಕೆಟ್ಗಾಗಿ ಪೈಪೋಟಿಯಲ್ಲಿದ್ದರು. ಏಳು ಬಾರಿ ಸತತವಾಗಿ ಈ ಕ್ಷೇತ್ರದಿಂದ ಆಯ್ಕೆಯಾಗಿರುವ ಬಸವರಾಜ ಹೊರಟ್ಟಿ ಅವರನ್ನು ಪಕ್ಷಕ್ಕೆ ಸೆಳೆದುಕೊಂಡು ಟಿಕೆಟ್ ನೀಡುವ ತೀರ್ಮಾನವನ್ನು ಬಿಜೆಪಿ ವರಿಷ್ಠರು ಮಾಡಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.</p>.<p><a href="https://www.prajavani.net/district/dharwad/karnataka-legislative-council-speaker-basavaraj-horatti-announces-to-join-bjp-soon-925014.html" itemprop="url" target="_blank">ಶೀಘ್ರದಲ್ಲೇ ಬಿಜೆಪಿ ಸೇರ್ಪಡೆ: ಬಸವರಾಜ ಹೊರಟ್ಟಿ ಘೋಷಣೆ</a></p>.<p>ಎರಡು ಕ್ಷೇತ್ರ ಬಾಕಿ: ಕಾಂಗ್ರೆಸ್ ದಕ್ಷಿಣ ಪದವೀಧರ ಕ್ಷೇತ್ರ ಮತ್ತು ಪಶ್ಚಿಮ ಶಿಕ್ಷಕರ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದ್ದು, ಉಳಿದ ಎರಡು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಬಾಕಿ ಇದೆ.</p>.<p>ದಕ್ಷಿಣ ಪದವೀಧರ ಕ್ಷೇತ್ರಕ್ಕೆ ಪರಿಷತ್ನ ಮಾಜಿ ಸದಸ್ಯ ಮಧು ಜಿ. ಮಾದೇಗೌಡ ಹಾಗೂ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಬಸವರಾಜ ಗುರಿಕಾರ ಅವರಿಗೆ ಟಿಕೆಟ್ ಘೋಷಿಸಲಾಗಿದೆ. ವಾಯವ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಅಭ್ಯರ್ಥಿಗಳ<br />ಆಯ್ಕೆಗೆ ಹಲವು ಸುತ್ತಿನ ಸಭೆ ನಡೆಸಿರುವ ಕೆಪಿಸಿಸಿ ಪ್ರಮುಖರು, ಸಂಭವನೀಯರ ಪಟ್ಟಿಯನ್ನು ಎಐಸಿಸಿಗೆ ಕಳುಹಿಸಿದ್ದಾರೆ.</p>.<p>ಜೆಡಿಎಸ್ ದಕ್ಷಿಣ ಪದವೀಧರ ಕ್ಷೇತ್ರದ ಹಾಲಿ ಸದಸ್ಯ ಕೆ.ಟಿ. ಶ್ರೀಕಂಠೇಗೌಡ ಬದಲಾಗಿ ಎಚ್.ಕೆ. ರಾಮು ಅವರಿಗೆ ಟಿಕೆಟ್ ಘೋಷಿಸಿದೆ. ಉಳಿದ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಇನ್ನೂ ಅಂತಿಮಗೊಂಡಿಲ್ಲ.</p>.<p>ಅಲ್ಲದೆ, ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ಆಯ್ಕೆ ಆಗಿರುವ ಆರ್.ಬಿ.ತಿಮ್ಮಾಪೂರ, ಅಲ್ಲಂ ವೀರಭದ್ರಪ್ಪ, ಎಸ್.ವೀಣಾ ಅಚ್ಚಯ್ಯ, ಕೆ.ವಿ.ನಾರಾಯಣಸ್ವಾಮಿ, ಲೆಹರ್ ಸಿಂಗ್ ಸಿರೋಯಾ, ಎಚ್.ಎಂ.ರಮೇಶ್ ಗೌಡ ಮತ್ತು ಲಕ್ಷ್ಮಣ ಸವದಿ ಅವರ ಅವಧಿ ಜೂನ್ 14 ಕ್ಕೆ ಮುಗಿಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>