ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Covid-19 Update: 944 ಹೊಸ ಪ್ರಕರಣ ದಾಖಲು

ಅಕ್ಷರ ಗಾತ್ರ

ಬೆಂಗಳೂರು:ರಾಜ್ಯದಲ್ಲಿಭಾನುವಾರ ಹೊಸದಾಗಿ 944 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.‌

ಇದರೊಂದಿಗೆ ಇದುವರೆಗೆ ವರದಿಯಾದ ಒಟ್ಟು ಸೋಂಕು ಪ್ರಕರಣಗಳಸಂಖ್ಯೆ 39,86,320ಕ್ಕೆ ಏರಿಕೆಯಾಗಿದೆ. ಆ ಪೈಕಿ 40,089 ಸೋಂಕಿತರು ಸಾವಿಗೀಡಾಗಿದ್ದಾರೆ. ಇಂದು ಆಸ್ಪತ್ರೆಗಳಿಂದ ಬಿಡುಗಡೆಯಾಗಿರುವ 670 ಮಂದಿಯೂ ಸೇರಿದಂತೆ, ಈವರೆಗೆ 39,38,620 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 7,569 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ದೈನಂದಿನ ಸೋಂಕು ಖಚಿತ ಪ್ರಮಾಣ ಶೇ 3.25 ರಷ್ಟಿದ್ದು, ಮರಣ ದರ ಶೇ 0.10 ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.‌

ರಾಜಧಾನಿ ಬೆಂಗಳೂರನಲ್ಲಿ799 ಪ್ರಕರಣಗಳು ಪತ್ತೆಯಾಗಿದೆ. ಉಳಿದಂತೆ ಬೆಂಗಳೂರು ಗ್ರಾಮಾಂತರ (11), ದಕ್ಷಿಣ ಕನ್ನಡ (16), ಧಾರವಾಡ (17) ಹಾಗೂ ಉತ್ತರ ಕನ್ನಡದಲ್ಲಿ (11) ಮಾತ್ರವೇ ಹತ್ತಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT