ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Covid-19 Updates: ಹೊಸದಾಗಿ 749 ಪ್ರಕರಣ ದಾಖಲು, 1 ಸಾವು

Last Updated 4 ಜುಲೈ 2022, 15:40 IST
ಅಕ್ಷರ ಗಾತ್ರ

ಬೆಂಗಳೂರು: 24 ಗಂಟೆಗಳಲ್ಲಿ ರಾಜ್ಯದಲ್ಲಿ ಹೊಸದಾಗಿ 749 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಇದೇ ಅವಧಿಯಲ್ಲಿ ಕೋವಿಡ್ ಸೋಂಕಿತರೊಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

940 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 6,474ರಷ್ಟಾಗಿದೆ.

24 ಗಂಟೆಗಳ ಅವಧಿಯಲ್ಲಿ 17,979 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ದೈನಂದಿನ ಪಾಸಿಟಿವಿಟಿ ದರ ಶೇಕಡ 4.16 ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇಕಡ 4.23ರಷ್ಟಿದೆ.

ಬೆಂಗಳೂರು ನಗರದಲ್ಲಿ 696, ದಕ್ಷಿಣ ಕನ್ನಡದಲ್ಲಿ 20, ಕೋಲಾರ ಮತ್ತು ಉಡುಪಿಯಲ್ಲಿ ತಲಾ 4, ಕಲಬುರಗಿ, ಮೈಸೂರು, ಬೀದರ್ ಮತ್ತು ಬಳ್ಳಾರಿಯಲ್ಲಿ ತಲಾ 3 ಪ್ರಕರಣಗಳು ದೃಢಪಟ್ಟಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT