<p><strong>ಬೆಂಗಳೂರು</strong>: ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ಗರಿಷ್ಠ ಮಟ್ಟ ತಲುಪಿದಾಗ ದಿನಕ್ಕೆ 1.2 ಲಕ್ಷ ಪ್ರಕರಣಗಳು ವರದಿಯಾಗುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.</p>.<p>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರುಮಂಗಳವಾರ ವರ್ಚುವಲ್ ರೂಪದಲ್ಲಿ ನಡೆಸಿದ 18 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಆರೋಗ್ಯಾಧಿಕಾರಿಗಳ ಸಭೆ ಬಳಿಕ ಸಚಿವ ಸುಧಾಕರ್ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.</p>.<p>ಕೊರೋನಾ ಸೋಂಕು ತಾರಕಕ್ಕೆ ಏರಿದಾಗ ಏನಾಗಬಹುದು ಎಂಬ ಬಗ್ಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ನೀಡಿರುವ ವರದಿಯನ್ನು ಉಲ್ಲೇಖಿಸಿ ವಿವರ ನೀಡಿದ ಅವರು, ಅದಕ್ಕಿಂತ ಉತ್ತಮ ಸ್ಥಿತಿ ಎಂದರೆ 80 ಸಾವಿರ ಪ್ರಕರಣಗಳು ವರದಿಯಾಗಬಹುದು. ಎರಡನೇ ಅಲೆಗೆ ಹೋಲಿಸಿದರೆ, ಈ ಬಾರಿ ಅತ್ಯಂತ ತ್ವರಿತಗತಿಯಲ್ಲಿ ಅಂದರೆ ನಾಲ್ಕರಿಂದ ಐದು ಪಟ್ಟು ವೇಗವಾಗಿ ಕೋವಿಡ್ ಹರಡುತ್ತಿದೆ ಎಂದು ಅವರು ಹೇಳಿದರು.</p>.<p>ರಾಜ್ಯದಲ್ಲಿ ಸೋಮವಾರ 27,156 ಹೊಸ ಪ್ರಕರಣ ವರದಿಯಾಗಿದ್ದವು. ಮಂಗಳವಾರ 41,457 ಹೊಸ ಪ್ರಕರಣಗಳು ವರದಿಯಾಗಿವೆ ಎಂದರು.</p>.<p>ಸಕ್ರಿಯ ಪ್ರಕರಣ 2,50,381 ಕ್ಕೆ ತಲುಪಿದೆ. ಬೆಂಗಳೂರಿನಲ್ಲಿ 25,596 ಪ್ರಕರಣಗಳು ದೃಢಪಟ್ಟಿದ್ದರೆ, ಉಳಿದ ಜಿಲ್ಲೆಗಳಲ್ಲಿ ಒಟ್ಟಾರೆ 15,861 ಕ್ಕೆ ಏರಿದೆ. ಗ್ರಾಮೀಣ ಪ್ರದೇಶಗಳಲ್ಲೂ ಏರುತ್ತಿದೆ ಎಂದರು.</p>.<p>ಮೂರನೇ ಅಲೆಯಲ್ಲಿ ಕೊರೊನಾ ಸೋಂಕು ವೇಗವಾಗಿ ಹರಡಿದ ಹಾಗೇ, ಅಷ್ಟೇ ವೇಗದಲ್ಲಿ ಇಳಿಕೆ ಆಗುವುದನ್ನೂ ಇತರ ರಾಜ್ಯಗಳಲ್ಲಿ ನೋಡಿದ್ದೇವೆ. ನಮ್ಮ ರಾಜ್ಯದಲ್ಲೂ ಅದೇ ರೀತಿ ಆಗುತ್ತದೆ. ಫೆಬ್ರುವರಿ ಎರಡು ಅಥವಾ ಮೂರನೇ ವಾರದಲ್ಲಿ ಪ್ರಕರಣಗಳು ಇಳಿಕೆಯಾಗುತ್ತಾ ಹೋಗುತ್ತವೆ ಎಂದು ಸುಧಾಕರ್ ಹೇಳಿದರು.</p>.<p>ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದರೂ ಸಾವಿನ ಸಂಖ್ಯೆ ಕಡಿಮೆ ಇರುವುದು ಸಮಾಧಾನಕರ ಸಂಗತಿ. ಲಸಿಕೆ ತೆಗೆದುಕೊಳ್ಳದವರ ಮೇಲೆ ಕೊರೊನಾ ಪ್ರಭಾವ ಹೆಚ್ಚಾಗಿದೆ ಎಂದರು.</p>.<p>60 ವರ್ಷ ಮೇಲ್ಪಟ್ಟವರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಮೂರನೇ ಡೋಸ್ ಲಸಿಕೆ ನೀಡುವ ಬಗ್ಗೆ ಹೆಚ್ಚಿನ ಒತ್ತು ನೀಡುತ್ತಿದ್ದೇವೆ. ಈವರೆಗೆ ಶೇ 39 ರಷ್ಟು ಜನರಿಗೆ ಮಾತ್ರ ಮೂರನೇ ಡೋಸ್ ನೀಡಲಾಗಿದೆ. ಇದು ತೃಪ್ತಿದಾಯಕವಾಗಿಲ್ಲ. ಮುಂದಿನ ವಾರ ಅಭಿಯಾನ ತ್ವರಿತಗೊಳಿಸಲಾಗುವುದು ಎಂದರು.</p>.<p>ರಾಜ್ಯದಲ್ಲಿ 264 ಆಮ್ಲಜನಕ ತಯಾರಿಕಾ ಘಟಕಗಳ ಪೈಕಿ 222 ಘಟಕಗಳನ್ನು ಸೇವೆಗಾಗಿ ಚಾಲನೆ ನೀಡಲಾಗಿದೆ. ವಾರಾಂತ್ಯ ಕರ್ಫ್ಯೂ ಹಿಂತೆಗೆದುಕೊಳ್ಳುವ ಬಗ್ಗೆ ಯಾವುದೇ ಚರ್ಚೆ ನಡೆಯಲಿಲ್ಲ ಎಂದು ತಿಳಿಸಿದರು.</p>.<p><strong>ವೈದ್ಯರ ನಡೆ ಹಳ್ಳಿ ಕಡೆ: ಸಿ.ಎಂ ಸೂಚನೆ</strong></p>.<p>ವೈದ್ಯರು ಮತ್ತು ಆರೋಗ್ಯ ಸಹಾಯಕಿಯರು ಗ್ರಾಮಾಂತರ ಪ್ರದೇಶಗಳಲ್ಲಿ ಪ್ರತಿ ಮನೆಗೂ ಭೇಟಿ ನೀಡಬೇಕು. ಇದಕ್ಕಾಗಿ ವಿಶೇಷ ಎಸ್ಒಪಿ (ಪ್ರಮಾಣಿತ ಕಾರ್ಯಾಚರಣೆ ವಿಧಾನ) ರೂಪಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆಯಲ್ಲಿ ಸೂಚಿಸಿದರು.</p>.<p>ಬೆಂಗಳೂರಿನಲ್ಲಿ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರ ರೋಗಿ ವಿಭಾಗಗಳನ್ನು(ಒಪಿಡಿ) ಬಲಪಡಿಸಲು ಹಾಗೂ ಜನಸಂಖ್ಯೆಗೆ ಅನುಗುಣವಾಗಿ ಹೊಸ ಒಪಿಡಿಗಳನ್ನು ಆರಂಭಿಸುವಂತೆಯೂ ತಿಳಿಸಿದರು.</p>.<p><strong>ಪ್ರಮುಖ ನಿರ್ದೇಶನಗಳು</strong></p>.<p>*ಜಿಲ್ಲಾಡಳಿತಗಳು ಪ್ರತಿ ಗ್ರಾಮದ ಕಟ್ಟಕಡೆಯ ಮನೆಗೂ ಔಷಧದ ಕಿಟ್ಗಳನ್ನು ತಲುಪಿಸಲು ಪರಿಣಾಮಕಾರಿಯಾಗಿ ಕ್ರಮ ತೆಗೆದುಕೊಳ್ಳಬೇಕು.</p>.<p>*ಜಿಲ್ಲಾಧಿಕಾರಿಗಳು, ಡಿ.ಎಚ್.ಒಗಳು ತಾಲ್ಲೂಕುಗಳಿಗೆ ಭೇಟಿ ನೀಡಿ ಔಷಧ ವಿತರಣೆಯ ಬಗ್ಗೆ ಪರಿಶೀಲನೆ ನಡೆಸಬೇಕು.</p>.<p>*ಪ್ರಯೋಗಾಲಯದ ವರದಿ ಬಂದ ತಕ್ಷಣ ಟೆಲಿ ಟ್ರಯಾಜಿಂಗ್ ಮಾಡಬೇಕು.</p>.<p>*ಕೆಲಸಕ್ಕಾಗಿ ಹೊರ ರಾಜ್ಯಗಳಿಂದ ಕಾರ್ಮಿಕರನ್ನು ಕರೆತರುವ ರಾಜ್ಯದ ಕೈಗಾರಿಕೆಗಳಿಗೆ ಕಾರ್ಮಿಕರ ಲಸಿಕೆ ನೀಡುವ ಮತ್ತು ಚಿಕಿತ್ಸೆ ನೀಡಲು ವಿಶೇಷ ಎಸ್ಒಪಿ ರೂಪಿಸಬೇಕು.</p>.<p>*ಎಲ್ಲ ಜಿಲ್ಲೆಗಳಲ್ಲಿ ದೃಢ ಪ್ರಮಾಣದ ದರ ಹೆಚ್ಚು ಇರುವುದರಿಂದ ಮಧುಮೇಹ, ರಕ್ತದೊತ್ತಡ, ಹೃದ್ರೋಗದಂತಹ ಕಾಯಿಲೆ ಇರುವವರನ್ನು ಗುರುತಿಸಬೇಕು. ಮನೆಗಳಲ್ಲಿ ಪ್ರತ್ಯೇಕ ಇರುವವರಿಗೆ, 60 ವರ್ಷ ಮೇಲ್ಪಟ್ಟವರಿಗೆ ಪರೀಕ್ಷೆ ಮಾಡಿ ಚಿಕಿತ್ಸೆ ನೀಡಬೇಕು. ಔಷಧಿ ಒದಗಿಸಬೇಕು.</p>.<p>*ಲಸಿಕೆ ಪಡೆದು 90 ದಿನಗಳು ಪೂರೈಸಿರುವವರ ಪಟ್ಟಿ ತಯಾರಿಸಿ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಲಸಿಕೆ ಕಾರ್ಯಕ್ರಮಮದ ಮೇಲ್ವಿಚಾರಣೆ ಜವಾಬ್ದಾರಿ ನೀಡಬೇಕು.</p>.<p>*ಮೊದಲನೇ ಮತ್ತು ಎರಡನೇ ಡೋಸ್ ಲಸಿಕೆ ಪ್ರಮಾಣದಲ್ಲಿ ರಾಜ್ಯ ಸರಾಸರಿಗಿಂತ ಕಡಿಮೆ ಇರುವ ಜಿಲ್ಲೆಗಳು ತಿಂಗಳ ಕೊನೆಯೊಳಗೆ ರಾಜ್ಯದ ಸರಾಸರಿ ತಲುಪಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ಗರಿಷ್ಠ ಮಟ್ಟ ತಲುಪಿದಾಗ ದಿನಕ್ಕೆ 1.2 ಲಕ್ಷ ಪ್ರಕರಣಗಳು ವರದಿಯಾಗುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.</p>.<p>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರುಮಂಗಳವಾರ ವರ್ಚುವಲ್ ರೂಪದಲ್ಲಿ ನಡೆಸಿದ 18 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಆರೋಗ್ಯಾಧಿಕಾರಿಗಳ ಸಭೆ ಬಳಿಕ ಸಚಿವ ಸುಧಾಕರ್ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.</p>.<p>ಕೊರೋನಾ ಸೋಂಕು ತಾರಕಕ್ಕೆ ಏರಿದಾಗ ಏನಾಗಬಹುದು ಎಂಬ ಬಗ್ಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ನೀಡಿರುವ ವರದಿಯನ್ನು ಉಲ್ಲೇಖಿಸಿ ವಿವರ ನೀಡಿದ ಅವರು, ಅದಕ್ಕಿಂತ ಉತ್ತಮ ಸ್ಥಿತಿ ಎಂದರೆ 80 ಸಾವಿರ ಪ್ರಕರಣಗಳು ವರದಿಯಾಗಬಹುದು. ಎರಡನೇ ಅಲೆಗೆ ಹೋಲಿಸಿದರೆ, ಈ ಬಾರಿ ಅತ್ಯಂತ ತ್ವರಿತಗತಿಯಲ್ಲಿ ಅಂದರೆ ನಾಲ್ಕರಿಂದ ಐದು ಪಟ್ಟು ವೇಗವಾಗಿ ಕೋವಿಡ್ ಹರಡುತ್ತಿದೆ ಎಂದು ಅವರು ಹೇಳಿದರು.</p>.<p>ರಾಜ್ಯದಲ್ಲಿ ಸೋಮವಾರ 27,156 ಹೊಸ ಪ್ರಕರಣ ವರದಿಯಾಗಿದ್ದವು. ಮಂಗಳವಾರ 41,457 ಹೊಸ ಪ್ರಕರಣಗಳು ವರದಿಯಾಗಿವೆ ಎಂದರು.</p>.<p>ಸಕ್ರಿಯ ಪ್ರಕರಣ 2,50,381 ಕ್ಕೆ ತಲುಪಿದೆ. ಬೆಂಗಳೂರಿನಲ್ಲಿ 25,596 ಪ್ರಕರಣಗಳು ದೃಢಪಟ್ಟಿದ್ದರೆ, ಉಳಿದ ಜಿಲ್ಲೆಗಳಲ್ಲಿ ಒಟ್ಟಾರೆ 15,861 ಕ್ಕೆ ಏರಿದೆ. ಗ್ರಾಮೀಣ ಪ್ರದೇಶಗಳಲ್ಲೂ ಏರುತ್ತಿದೆ ಎಂದರು.</p>.<p>ಮೂರನೇ ಅಲೆಯಲ್ಲಿ ಕೊರೊನಾ ಸೋಂಕು ವೇಗವಾಗಿ ಹರಡಿದ ಹಾಗೇ, ಅಷ್ಟೇ ವೇಗದಲ್ಲಿ ಇಳಿಕೆ ಆಗುವುದನ್ನೂ ಇತರ ರಾಜ್ಯಗಳಲ್ಲಿ ನೋಡಿದ್ದೇವೆ. ನಮ್ಮ ರಾಜ್ಯದಲ್ಲೂ ಅದೇ ರೀತಿ ಆಗುತ್ತದೆ. ಫೆಬ್ರುವರಿ ಎರಡು ಅಥವಾ ಮೂರನೇ ವಾರದಲ್ಲಿ ಪ್ರಕರಣಗಳು ಇಳಿಕೆಯಾಗುತ್ತಾ ಹೋಗುತ್ತವೆ ಎಂದು ಸುಧಾಕರ್ ಹೇಳಿದರು.</p>.<p>ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದರೂ ಸಾವಿನ ಸಂಖ್ಯೆ ಕಡಿಮೆ ಇರುವುದು ಸಮಾಧಾನಕರ ಸಂಗತಿ. ಲಸಿಕೆ ತೆಗೆದುಕೊಳ್ಳದವರ ಮೇಲೆ ಕೊರೊನಾ ಪ್ರಭಾವ ಹೆಚ್ಚಾಗಿದೆ ಎಂದರು.</p>.<p>60 ವರ್ಷ ಮೇಲ್ಪಟ್ಟವರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಮೂರನೇ ಡೋಸ್ ಲಸಿಕೆ ನೀಡುವ ಬಗ್ಗೆ ಹೆಚ್ಚಿನ ಒತ್ತು ನೀಡುತ್ತಿದ್ದೇವೆ. ಈವರೆಗೆ ಶೇ 39 ರಷ್ಟು ಜನರಿಗೆ ಮಾತ್ರ ಮೂರನೇ ಡೋಸ್ ನೀಡಲಾಗಿದೆ. ಇದು ತೃಪ್ತಿದಾಯಕವಾಗಿಲ್ಲ. ಮುಂದಿನ ವಾರ ಅಭಿಯಾನ ತ್ವರಿತಗೊಳಿಸಲಾಗುವುದು ಎಂದರು.</p>.<p>ರಾಜ್ಯದಲ್ಲಿ 264 ಆಮ್ಲಜನಕ ತಯಾರಿಕಾ ಘಟಕಗಳ ಪೈಕಿ 222 ಘಟಕಗಳನ್ನು ಸೇವೆಗಾಗಿ ಚಾಲನೆ ನೀಡಲಾಗಿದೆ. ವಾರಾಂತ್ಯ ಕರ್ಫ್ಯೂ ಹಿಂತೆಗೆದುಕೊಳ್ಳುವ ಬಗ್ಗೆ ಯಾವುದೇ ಚರ್ಚೆ ನಡೆಯಲಿಲ್ಲ ಎಂದು ತಿಳಿಸಿದರು.</p>.<p><strong>ವೈದ್ಯರ ನಡೆ ಹಳ್ಳಿ ಕಡೆ: ಸಿ.ಎಂ ಸೂಚನೆ</strong></p>.<p>ವೈದ್ಯರು ಮತ್ತು ಆರೋಗ್ಯ ಸಹಾಯಕಿಯರು ಗ್ರಾಮಾಂತರ ಪ್ರದೇಶಗಳಲ್ಲಿ ಪ್ರತಿ ಮನೆಗೂ ಭೇಟಿ ನೀಡಬೇಕು. ಇದಕ್ಕಾಗಿ ವಿಶೇಷ ಎಸ್ಒಪಿ (ಪ್ರಮಾಣಿತ ಕಾರ್ಯಾಚರಣೆ ವಿಧಾನ) ರೂಪಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆಯಲ್ಲಿ ಸೂಚಿಸಿದರು.</p>.<p>ಬೆಂಗಳೂರಿನಲ್ಲಿ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರ ರೋಗಿ ವಿಭಾಗಗಳನ್ನು(ಒಪಿಡಿ) ಬಲಪಡಿಸಲು ಹಾಗೂ ಜನಸಂಖ್ಯೆಗೆ ಅನುಗುಣವಾಗಿ ಹೊಸ ಒಪಿಡಿಗಳನ್ನು ಆರಂಭಿಸುವಂತೆಯೂ ತಿಳಿಸಿದರು.</p>.<p><strong>ಪ್ರಮುಖ ನಿರ್ದೇಶನಗಳು</strong></p>.<p>*ಜಿಲ್ಲಾಡಳಿತಗಳು ಪ್ರತಿ ಗ್ರಾಮದ ಕಟ್ಟಕಡೆಯ ಮನೆಗೂ ಔಷಧದ ಕಿಟ್ಗಳನ್ನು ತಲುಪಿಸಲು ಪರಿಣಾಮಕಾರಿಯಾಗಿ ಕ್ರಮ ತೆಗೆದುಕೊಳ್ಳಬೇಕು.</p>.<p>*ಜಿಲ್ಲಾಧಿಕಾರಿಗಳು, ಡಿ.ಎಚ್.ಒಗಳು ತಾಲ್ಲೂಕುಗಳಿಗೆ ಭೇಟಿ ನೀಡಿ ಔಷಧ ವಿತರಣೆಯ ಬಗ್ಗೆ ಪರಿಶೀಲನೆ ನಡೆಸಬೇಕು.</p>.<p>*ಪ್ರಯೋಗಾಲಯದ ವರದಿ ಬಂದ ತಕ್ಷಣ ಟೆಲಿ ಟ್ರಯಾಜಿಂಗ್ ಮಾಡಬೇಕು.</p>.<p>*ಕೆಲಸಕ್ಕಾಗಿ ಹೊರ ರಾಜ್ಯಗಳಿಂದ ಕಾರ್ಮಿಕರನ್ನು ಕರೆತರುವ ರಾಜ್ಯದ ಕೈಗಾರಿಕೆಗಳಿಗೆ ಕಾರ್ಮಿಕರ ಲಸಿಕೆ ನೀಡುವ ಮತ್ತು ಚಿಕಿತ್ಸೆ ನೀಡಲು ವಿಶೇಷ ಎಸ್ಒಪಿ ರೂಪಿಸಬೇಕು.</p>.<p>*ಎಲ್ಲ ಜಿಲ್ಲೆಗಳಲ್ಲಿ ದೃಢ ಪ್ರಮಾಣದ ದರ ಹೆಚ್ಚು ಇರುವುದರಿಂದ ಮಧುಮೇಹ, ರಕ್ತದೊತ್ತಡ, ಹೃದ್ರೋಗದಂತಹ ಕಾಯಿಲೆ ಇರುವವರನ್ನು ಗುರುತಿಸಬೇಕು. ಮನೆಗಳಲ್ಲಿ ಪ್ರತ್ಯೇಕ ಇರುವವರಿಗೆ, 60 ವರ್ಷ ಮೇಲ್ಪಟ್ಟವರಿಗೆ ಪರೀಕ್ಷೆ ಮಾಡಿ ಚಿಕಿತ್ಸೆ ನೀಡಬೇಕು. ಔಷಧಿ ಒದಗಿಸಬೇಕು.</p>.<p>*ಲಸಿಕೆ ಪಡೆದು 90 ದಿನಗಳು ಪೂರೈಸಿರುವವರ ಪಟ್ಟಿ ತಯಾರಿಸಿ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಲಸಿಕೆ ಕಾರ್ಯಕ್ರಮಮದ ಮೇಲ್ವಿಚಾರಣೆ ಜವಾಬ್ದಾರಿ ನೀಡಬೇಕು.</p>.<p>*ಮೊದಲನೇ ಮತ್ತು ಎರಡನೇ ಡೋಸ್ ಲಸಿಕೆ ಪ್ರಮಾಣದಲ್ಲಿ ರಾಜ್ಯ ಸರಾಸರಿಗಿಂತ ಕಡಿಮೆ ಇರುವ ಜಿಲ್ಲೆಗಳು ತಿಂಗಳ ಕೊನೆಯೊಳಗೆ ರಾಜ್ಯದ ಸರಾಸರಿ ತಲುಪಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>