<p><strong>ಬೆಂಗಳೂರು</strong>: ಕರ್ನಾಟಕದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂಕಿ-ಅಂಶ ಸ್ಪಷ್ಟವಾಗಿದೆ. ಅಂಕಿ-ಅಂಶಗಳಿಗೆ ಸಂಬಂಧಿಸಿದ ಯಾವುದೇ ಊಹಾಪೋಹಗಳು, ಅಪಪ್ರಚಾರಗಳಿಗೆ ಜನ ಕಿವಿಗೊಡುವುದು ಬೇಡ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಅವರು ಶುಕ್ರವಾರ ಹೇಳಿದ್ದಾರೆ.</p>.<p>ಕೋವಿಡ್ ಸೋಂಕು ಮತ್ತು ಅದಕ್ಕೆ ಸಂಬಂಧಿಸಿದ ಪರಿಣಾಮಗಳಿಂದ 2020 ಮತ್ತು 2021ರಲ್ಲಿ ವಿಶ್ವದಾದ್ಯಂತ ಸುಮಾರು 1.5 ಕೋಟಿ ಜನರು ಮೃತಪಟ್ಟಿರುವುದಾಗಿಯೂ, ಇದೇ ಅವಧಿಯಲ್ಲಿ ಭಾರತದಲ್ಲಿ 47 ಲಕ್ಷ ಜನ ಸಾವಿಗೀಡಾಗಿರುವುದಾಗಿಯೂ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯೂಎಚ್ಒ) ಗುರುವಾರ ಅಂದಾಜು ಮಾಡಿದೆ.</p>.<p>ವಿಶ್ವ ಆರೋಗ್ಯ ಸಂಸ್ಥೆಯ ಈ ಅಂದಾಜನ್ನು ಭಾರತ ಗುರುವಾರವೇ ಆಕ್ಷೇಪಿಸಿದೆ. ಇದೇ ಹಿನ್ನೆಲೆಯಲ್ಲೇ ಪ್ರತಿಕ್ರಿಯೆ ನೀಡಿರುವ ರಾಜ್ಯ ಆರೋಗ್ಯ ಸಚಿವ ಸುಧಾಕರ್, ‘ಕೊರೊನಾ ಅಂಕಿ-ಅಂಶ ದಾಖಲಿಸಲು ರಾಜ್ಯದಲ್ಲಿ ಪಾರದರ್ಶಕ ವ್ಯವಸ್ಥೆ ಪಾಲಿಸಲಾಗಿದ್ದು ಈವರೆಗೂ 40,060 ಜನ ಕೊರೊನಾ ಸೋಂಕಿನಿಂದ ಮೃತಪಟ್ಟಿರುವ ಅಧಿಕೃತ ದಾಖಲೆ ಇದೆ. ಊಹಾಪೋಹಗಳು, ಅಪಪ್ರಚಾರಗಳಿಗೆ ಜನ ಕಿವಿಗೊಡಬಾರದು’ ಎಂದು ಹೇಳಿದ್ದಾರೆ.</p>.<p>‘ಸಾವಿನ ಪ್ರಮಾಣವನ್ನು ಅಂದಾಜಿಸಲು ಡಬ್ಲ್ಯೂಎಚ್ಒ ಅನುಸರಿಸಿರುವ ಮಾದರಿ ಹಾಗೂ ಅಂಕಿ– ಅಂಶಗಳ ಸಂಗ್ರಹ ಕ್ರಮವು ಪ್ರಶ್ನಾರ್ಹವಾಗಿದೆ’ ಎಂದು ಭಾರತ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕರ್ನಾಟಕದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂಕಿ-ಅಂಶ ಸ್ಪಷ್ಟವಾಗಿದೆ. ಅಂಕಿ-ಅಂಶಗಳಿಗೆ ಸಂಬಂಧಿಸಿದ ಯಾವುದೇ ಊಹಾಪೋಹಗಳು, ಅಪಪ್ರಚಾರಗಳಿಗೆ ಜನ ಕಿವಿಗೊಡುವುದು ಬೇಡ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಅವರು ಶುಕ್ರವಾರ ಹೇಳಿದ್ದಾರೆ.</p>.<p>ಕೋವಿಡ್ ಸೋಂಕು ಮತ್ತು ಅದಕ್ಕೆ ಸಂಬಂಧಿಸಿದ ಪರಿಣಾಮಗಳಿಂದ 2020 ಮತ್ತು 2021ರಲ್ಲಿ ವಿಶ್ವದಾದ್ಯಂತ ಸುಮಾರು 1.5 ಕೋಟಿ ಜನರು ಮೃತಪಟ್ಟಿರುವುದಾಗಿಯೂ, ಇದೇ ಅವಧಿಯಲ್ಲಿ ಭಾರತದಲ್ಲಿ 47 ಲಕ್ಷ ಜನ ಸಾವಿಗೀಡಾಗಿರುವುದಾಗಿಯೂ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯೂಎಚ್ಒ) ಗುರುವಾರ ಅಂದಾಜು ಮಾಡಿದೆ.</p>.<p>ವಿಶ್ವ ಆರೋಗ್ಯ ಸಂಸ್ಥೆಯ ಈ ಅಂದಾಜನ್ನು ಭಾರತ ಗುರುವಾರವೇ ಆಕ್ಷೇಪಿಸಿದೆ. ಇದೇ ಹಿನ್ನೆಲೆಯಲ್ಲೇ ಪ್ರತಿಕ್ರಿಯೆ ನೀಡಿರುವ ರಾಜ್ಯ ಆರೋಗ್ಯ ಸಚಿವ ಸುಧಾಕರ್, ‘ಕೊರೊನಾ ಅಂಕಿ-ಅಂಶ ದಾಖಲಿಸಲು ರಾಜ್ಯದಲ್ಲಿ ಪಾರದರ್ಶಕ ವ್ಯವಸ್ಥೆ ಪಾಲಿಸಲಾಗಿದ್ದು ಈವರೆಗೂ 40,060 ಜನ ಕೊರೊನಾ ಸೋಂಕಿನಿಂದ ಮೃತಪಟ್ಟಿರುವ ಅಧಿಕೃತ ದಾಖಲೆ ಇದೆ. ಊಹಾಪೋಹಗಳು, ಅಪಪ್ರಚಾರಗಳಿಗೆ ಜನ ಕಿವಿಗೊಡಬಾರದು’ ಎಂದು ಹೇಳಿದ್ದಾರೆ.</p>.<p>‘ಸಾವಿನ ಪ್ರಮಾಣವನ್ನು ಅಂದಾಜಿಸಲು ಡಬ್ಲ್ಯೂಎಚ್ಒ ಅನುಸರಿಸಿರುವ ಮಾದರಿ ಹಾಗೂ ಅಂಕಿ– ಅಂಶಗಳ ಸಂಗ್ರಹ ಕ್ರಮವು ಪ್ರಶ್ನಾರ್ಹವಾಗಿದೆ’ ಎಂದು ಭಾರತ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>