ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Covid Update: ಹೊಸ ಪ್ರಕರಣಗಳ ಸಂಖ್ಯೆ ಇಳಿಕೆ, 81 ಮಂದಿ ಸಾವು

Last Updated 2 ಫೆಬ್ರುವರಿ 2022, 16:30 IST
ಅಕ್ಷರ ಗಾತ್ರ

ಬೆಂಗಳೂರು:ರಾಜ್ಯದಲ್ಲಿ ಕೋವಿಡ್‌ನಿಂದಮೃತಪಡುವವರ ಸಂಖ್ಯೆ ಹೆಚ್ಚಳವಾಗಿದ್ದು, ಸೋಂಕಿತರಲ್ಲಿ 81 ಮಂದಿ ಸಾವಿಗೀಡಾಗಿರುವುದು ಬುಧವಾರ ದೃಢಪಟ್ಟಿದೆ.

ಏಳು ತಿಂಗಳಲ್ಲಿ 24 ಗಂಟೆಗಳ ಅವಧಿಯಲ್ಲಿ ವರದಿಯಾದಗರಿಷ್ಠಮರಣಪ್ರಕರಣಗಳು ಇವಾಗಿವೆ. ಕಳೆದ ತಿಂಗಳು (ಜ.29) 70 ಮಂದಿ ಸಾವಿಗೀಡಾಗಿದ್ದರು.ಒಂದು ದಿನದ ಅವಧಿಯಲ್ಲಿ 1.63 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. 20,505 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ.ಸೋಂಕು ದೃಢ ಪ್ರಮಾಣ ಶೇ 12.55 ರಷ್ಟಿದೆ.ಈವರೆಗೆ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 38.44 ಲಕ್ಷಕ್ಕೆ ಏರಿಕೆಯಾಗಿದೆ.

ಎರಡು ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ನಾಲ್ಕು ಅಂಕಿ, 23 ಜಿಲ್ಲೆಗಳಲ್ಲಿ ಮೂರು ಅಂಕಿಯಲ್ಲಿದೆ.ಬೆಂಗಳೂರಿನಲ್ಲಿ 8,850 ಮಂದಿ ಸೋಂಕಿತರಾಗಿದ್ದಾರೆ. ಮೈಸೂರಿನಲ್ಲಿ 1,209, ಬೆಳಗಾವಿಯಲ್ಲಿ 1,060, ತುಮಕೂರಿನಲ್ಲಿ 762, ಶಿವಮೊಗ್ಗದಲ್ಲಿ 715, ಧಾರವಾಡದಲ್ಲಿ 633, ಉತ್ತರ ಕನ್ನಡದಲ್ಲಿ 595, ಹಾಸನದಲ್ಲಿ 590, ಮಂಡ್ಯದಲ್ಲಿ 579, ಕೊಡಗಿನಲ್ಲಿ 543 ಹಾಗೂ ಉಡುಪಿಯಲ್ಲಿ 542 ಮಂದಿಕೋವಿಡ್ ಪೀಡಿತರಾಗಿದ್ದಾರೆ.ಉಳಿದ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು 500ಕ್ಕಿಂತ ಕಡಿಮೆ ಇವೆ.

ಸೋಂಕಿತರಲ್ಲಿ ಬೆಂಗಳೂರಿನಲ್ಲಿ 21,493 ಮಂದಿ ಸೇರಿದಂತೆ ರಾಜ್ಯದಲ್ಲಿ 40,903 ಮಂದಿ ಚೇತರಿಸಿಕೊಂಡಿದ್ದಾರೆ.ರಾಜ್ಯದಲ್ಲಿ ಈವರೆಗೆ ಗುಣಮುಖರಾದವರ ಒಟ್ಟು ಸಂಖ್ಯೆ 36.27 ಲಕ್ಷಕ್ಕೆ ತಲುಪಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1.77 ಲಕ್ಷಕ್ಕೆ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 96 ಸಾವಿರ ಸಕ್ರಿಯ ಪ್ರಕರಣಗಳಿವೆ.

ಕೊರೊನಾ ಸೋಂಕಿತರಲ್ಲಿ ಬೆಂಗಳೂರಿನಲ್ಲಿ 13 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ದಕ್ಷಿಣ ಕನ್ನಡದಲ್ಲಿ 10 ಮಂದಿ, ಮಂಡ್ಯ ಹಾಗೂ ಮೈಸೂರಿನಲ್ಲಿ ತಲಾ ಆರು ಮಂದಿ, ತುಮಕೂರು ಹಾಗೂ ಶಿವಮೊಗ್ಗದಲ್ಲಿ ತಲಾ ಐವರು, ಕೋಲಾರ, ಕಲಬುರಗಿ, ಬೀದರ್ ಹಾಗೂ ಬಳ್ಳಾರಿಯಲ್ಲಿ ತಲಾ ನಾಲ್ಕು, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ತಲಾ ಮೂವರುಸಾವಿಗೀಡಾಗಿದ್ದಾರೆ.

ರಾಜ್ಯದಲ್ಲಿಮರಣಪ್ರಮಾಣ ದರವು ಶೇ 0.39ಕ್ಕೆ ಏರಿಕೆಯಾಗಿದೆ. ಈವರೆಗೆ ಕೋವಿಡ್‌ಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 39,137ಕ್ಕೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT