ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್: ರಾಜ್ಯದಲ್ಲಿ 29 ಲಕ್ಷ ಮಂದಿ ಗುಣಮುಖ

Last Updated 5 ಸೆಪ್ಟೆಂಬರ್ 2021, 20:20 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಕೊರೊನಾ ಸೋಂಕಿತರಲ್ಲಿ 1,354 ಮಂದಿ ಭಾನುವಾರ ಚೇತರಿಸಿಕೊಂಡಿದ್ದಾರೆ. ಗುಣಮುಖರಾದವರ ಒಟ್ಟು ಸಂಖ್ಯೆ 29 ಲಕ್ಷ ದಾಟಿದೆ.

ಹೊಸದಾಗಿ 1,117 ಮಂದಿಸೋಂಕಿತರಾಗಿರುವುದು ದೃಢಪಟ್ಟಿದೆ. ಈವರೆಗೆ ವರದಿಯಾದ ಕೋವಿಡ್‌ ಪ್ರಕರಣಗಳ ಒಟ್ಟು ಸಂಖ್ಯೆ 29.55 ಲಕ್ಷಕ್ಕೆಏರಿಕೆ ಕಂಡಿದೆ. ಒಂದು ದಿನದಲ್ಲಿ 1.56 ಲಕ್ಷಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಸೋಂಕು ದೃಢ ಪ್ರಮಾಣ ಶೇ 0.71ರಷ್ಟು ವರದಿಯಾಗಿದೆ.

11 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಎರಡಂಕಿ, 8 ಜಿಲ್ಲೆಗಳಲ್ಲಿ ಒಂದಂಕಿಯಲ್ಲಿದೆ. ಬಾಗಲಕೋಟೆ, ಬೀದರ್, ಗದಗ, ಹಾವೇರಿ, ರಾಯಚೂರು, ರಾಮನಗರ, ವಿಜಯಪುರ ಹಾಗೂ ಯಾದಗಿರಿಯಲ್ಲಿಹೊಸ ಪ್ರಕರಣ ವರದಿಯಾಗಿಲ್ಲ.

ಕೇರಳಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡದಲ್ಲಿ 183, ಕೊಡಗಿನಲ್ಲಿ 62 ಹಾಗೂ ಮೈಸೂರಿನಲ್ಲಿ 59 ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲಿ 358 ಹಾಗೂ ಉಡುಪಿಯಲ್ಲಿ 130 ಮಂದಿಸೋಂಕಿತರಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಹೊಸ ‍ಪ್ರಕರಣಗಳು 100 ರ ಗಡಿಯೊಳಗೆ ಇವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 17,501ಕ್ಕೆ ಇಳಿಕೆಯಾಗಿದೆ.

ಕೋವಿಡ್ ಪೀಡಿತರಲ್ಲಿ 8ಮಂದಿಮೃತಪಟ್ಟಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ 5 ಮಂದಿ, ಬೆಳಗಾವಿ, ದಕ್ಷಿಣ ಕನ್ನಡ ಹಾಗೂ ಮೈಸೂರಿನಲ್ಲಿ ತಲಾಒಬ್ಬರು ಮೃತಪಟ್ಟಿದ್ದಾರೆ. ಮರಣ ಪ್ರಮಾಣ ದರವು ಶೇ 0.71 ರಷ್ಟು ವರದಿಯಾಗಿದೆ. ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 37,409ಕ್ಕೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT