<p><strong>ಬೆಂಗಳೂರು: </strong>ರಾಜ್ಯದ ಕೊರೊನಾ ಸೋಂಕಿತರಲ್ಲಿ 1,354 ಮಂದಿ ಭಾನುವಾರ ಚೇತರಿಸಿಕೊಂಡಿದ್ದಾರೆ. ಗುಣಮುಖರಾದವರ ಒಟ್ಟು ಸಂಖ್ಯೆ 29 ಲಕ್ಷ ದಾಟಿದೆ.</p>.<p>ಹೊಸದಾಗಿ 1,117 ಮಂದಿಸೋಂಕಿತರಾಗಿರುವುದು ದೃಢಪಟ್ಟಿದೆ. ಈವರೆಗೆ ವರದಿಯಾದ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 29.55 ಲಕ್ಷಕ್ಕೆಏರಿಕೆ ಕಂಡಿದೆ. ಒಂದು ದಿನದಲ್ಲಿ 1.56 ಲಕ್ಷಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಸೋಂಕು ದೃಢ ಪ್ರಮಾಣ ಶೇ 0.71ರಷ್ಟು ವರದಿಯಾಗಿದೆ.</p>.<p>11 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಎರಡಂಕಿ, 8 ಜಿಲ್ಲೆಗಳಲ್ಲಿ ಒಂದಂಕಿಯಲ್ಲಿದೆ. ಬಾಗಲಕೋಟೆ, ಬೀದರ್, ಗದಗ, ಹಾವೇರಿ, ರಾಯಚೂರು, ರಾಮನಗರ, ವಿಜಯಪುರ ಹಾಗೂ ಯಾದಗಿರಿಯಲ್ಲಿಹೊಸ ಪ್ರಕರಣ ವರದಿಯಾಗಿಲ್ಲ.</p>.<p>ಕೇರಳಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡದಲ್ಲಿ 183, ಕೊಡಗಿನಲ್ಲಿ 62 ಹಾಗೂ ಮೈಸೂರಿನಲ್ಲಿ 59 ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲಿ 358 ಹಾಗೂ ಉಡುಪಿಯಲ್ಲಿ 130 ಮಂದಿಸೋಂಕಿತರಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು 100 ರ ಗಡಿಯೊಳಗೆ ಇವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 17,501ಕ್ಕೆ ಇಳಿಕೆಯಾಗಿದೆ.</p>.<p>ಕೋವಿಡ್ ಪೀಡಿತರಲ್ಲಿ 8ಮಂದಿಮೃತಪಟ್ಟಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ 5 ಮಂದಿ, ಬೆಳಗಾವಿ, ದಕ್ಷಿಣ ಕನ್ನಡ ಹಾಗೂ ಮೈಸೂರಿನಲ್ಲಿ ತಲಾಒಬ್ಬರು ಮೃತಪಟ್ಟಿದ್ದಾರೆ. ಮರಣ ಪ್ರಮಾಣ ದರವು ಶೇ 0.71 ರಷ್ಟು ವರದಿಯಾಗಿದೆ. ಕೋವಿಡ್ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 37,409ಕ್ಕೆ ತಲುಪಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯದ ಕೊರೊನಾ ಸೋಂಕಿತರಲ್ಲಿ 1,354 ಮಂದಿ ಭಾನುವಾರ ಚೇತರಿಸಿಕೊಂಡಿದ್ದಾರೆ. ಗುಣಮುಖರಾದವರ ಒಟ್ಟು ಸಂಖ್ಯೆ 29 ಲಕ್ಷ ದಾಟಿದೆ.</p>.<p>ಹೊಸದಾಗಿ 1,117 ಮಂದಿಸೋಂಕಿತರಾಗಿರುವುದು ದೃಢಪಟ್ಟಿದೆ. ಈವರೆಗೆ ವರದಿಯಾದ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 29.55 ಲಕ್ಷಕ್ಕೆಏರಿಕೆ ಕಂಡಿದೆ. ಒಂದು ದಿನದಲ್ಲಿ 1.56 ಲಕ್ಷಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಸೋಂಕು ದೃಢ ಪ್ರಮಾಣ ಶೇ 0.71ರಷ್ಟು ವರದಿಯಾಗಿದೆ.</p>.<p>11 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಎರಡಂಕಿ, 8 ಜಿಲ್ಲೆಗಳಲ್ಲಿ ಒಂದಂಕಿಯಲ್ಲಿದೆ. ಬಾಗಲಕೋಟೆ, ಬೀದರ್, ಗದಗ, ಹಾವೇರಿ, ರಾಯಚೂರು, ರಾಮನಗರ, ವಿಜಯಪುರ ಹಾಗೂ ಯಾದಗಿರಿಯಲ್ಲಿಹೊಸ ಪ್ರಕರಣ ವರದಿಯಾಗಿಲ್ಲ.</p>.<p>ಕೇರಳಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡದಲ್ಲಿ 183, ಕೊಡಗಿನಲ್ಲಿ 62 ಹಾಗೂ ಮೈಸೂರಿನಲ್ಲಿ 59 ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲಿ 358 ಹಾಗೂ ಉಡುಪಿಯಲ್ಲಿ 130 ಮಂದಿಸೋಂಕಿತರಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು 100 ರ ಗಡಿಯೊಳಗೆ ಇವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 17,501ಕ್ಕೆ ಇಳಿಕೆಯಾಗಿದೆ.</p>.<p>ಕೋವಿಡ್ ಪೀಡಿತರಲ್ಲಿ 8ಮಂದಿಮೃತಪಟ್ಟಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ 5 ಮಂದಿ, ಬೆಳಗಾವಿ, ದಕ್ಷಿಣ ಕನ್ನಡ ಹಾಗೂ ಮೈಸೂರಿನಲ್ಲಿ ತಲಾಒಬ್ಬರು ಮೃತಪಟ್ಟಿದ್ದಾರೆ. ಮರಣ ಪ್ರಮಾಣ ದರವು ಶೇ 0.71 ರಷ್ಟು ವರದಿಯಾಗಿದೆ. ಕೋವಿಡ್ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 37,409ಕ್ಕೆ ತಲುಪಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>