ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Covid-19 Update: ಕೋವಿಡ್ ಪ್ರಕರಣಗಳ ಸಂಖ್ಯೆ 29 ಲಕ್ಷಕ್ಕೆ ಏರಿಕೆ

Last Updated 19 ಸೆಪ್ಟೆಂಬರ್ 2021, 20:46 IST
ಅಕ್ಷರ ಗಾತ್ರ

ಬೆಂಗಳೂರು:ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದ್ದು,783 ಮಂದಿ ಕೋವಿಡ್ ಪೀಡಿತರಾಗಿರುವುದು ಭಾನುವಾರ ದೃಢಪಟ್ಟಿದೆ. ಸೋಂಕಿತರ ಒಟ್ಟು ಸಂಖ್ಯೆ 29.67 ಲಕ್ಷ ದಾಟಿದೆ.

ಒಂದು ದಿನದಲ್ಲಿ 1.29 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ‌ಸೋಂಕು ದೃಢ ಪ್ರಮಾಣವು ಶೇ 0.60ರಷ್ಟಿದೆ.12 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಎರಡಂಕಿಯಲ್ಲಿದೆ. ಬಾಗಲಕೋಟೆ, ಕೊಪ್ಪಳ, ರಾಯಚೂರು, ರಾಮನಗರ ಹಾಗೂ ಯಾದಗಿರಿಯಲ್ಲಿಹೊಸಪ್ರಕರಣವರದಿಯಾಗಿಲ್ಲ.

ಕೇರಳಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡದಲ್ಲಿ 97, ಮೈಸೂರಿನಲ್ಲಿ 69 ಹಾಗೂ ಕೊಡಗಿನಲ್ಲಿ 41 ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲಿ 267 ಹಾಗೂ ಉಡುಪಿಯಲ್ಲಿ 82 ಮಂದಿ ಸೋಂಕಿತರಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿಹೊಸ ‍ಪ್ರಕರಣಗಳು 50ರ ಗಡಿಯೊಳಗೆ ಇವೆ.

ಕೋವಿಡ್ಪೀಡಿತರಲ್ಲಿ16 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ.6 ಜಿಲ್ಲೆಗಳಲ್ಲಿ ಹೊಸದಾಗಿ ಮರಣ ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ 7, ಬೆಳಗಾವಿಯಲ್ಲಿ 4 ಹಾಗೂ ಉಡುಪಿಯಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ. ಹಾಸನ, ದಾವಣಗೆರೆ ಹಾಗೂ ದಕ್ಷಿಣ ಕನ್ನಡದಲ್ಲಿತಲಾ ಒಬ್ಬರು ಮೃತಪಟ್ಟಿದ್ದಾರೆ.ಮರಣ ಪ್ರಮಾಣ ದರವು ಶೇ 2.04 ರಷ್ಟು ವರದಿಯಾಗಿದೆ.ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 37,603ಕ್ಕೆ ತಲುಪಿದೆ.

ಸೋಂಕಿತರಲ್ಲಿ1,139 ಮಂದಿ ಚೇತರಿಸಿಕೊಂಡಿದ್ದಾರೆ. ಗುಣಮುರಾದವರ ಒಟ್ಟು ಸಂಖ್ಯೆ 29.14 ಲಕ್ಷದಾಟಿದೆ.ಕೋವಿಡ್ಸಕ್ರಿಯಪ್ರಕರಣಗಳ ಸಂಖ್ಯೆ 15,383ಕ್ಕೆ ಇಳಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT