<p><strong>ಬೆಂಗಳೂರು:</strong> ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳು ಇಳಿಮುಖವಾಗಿವೆ. ಸೋಮವಾರ257 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಈವರೆಗೆ ಸೋಂಕಿಗೊಳಪಟ್ಟವರ ಸಂಖ್ಯೆ 29.95 ಲಕ್ಷಕ್ಕೆ ಮುಟ್ಟಿದ್ದು,ಸೋಂಕು ದೃಢ ಪ್ರಮಾಣವು ಶೇ 0.45ಕ್ಕೆ ತಗ್ಗಿದೆ.</p>.<div class="field-items"><div class="field-item even"><p>ಕೋವಿಡ್ ಪೀಡಿತರ ಪೈಕಿ ಮತ್ತೆ 5 ಮಂದಿ ಅಸುನೀಗಿದ್ದಾರೆ. ಹೀಗಾಗಿ ಮೃತರ ಒಟ್ಟು ಸಂಖ್ಯೆ38,203ಕ್ಕೆ ಏರಿದೆ. ಮರಣ ಪ್ರಮಾಣ ದರವು ಶೇ1.94ರಷ್ಟಿದೆ.</p><p>ಒಂದು ದಿನದಲ್ಲಿ205 ಜನರಿಗೆ ಕಾಯಿಲೆ ವಾಸಿಯಾಗಿದೆ. ಈವರೆಗೆ ಚೇತರಿಸಿಕೊಂಡವರ ಸಂಖ್ಯೆ 29.50 ಲಕ್ಷದಷ್ಟಿದೆ. ಸಕ್ರಿಯ ಪ್ರಕರಣಗಳು ಹೆಚ್ಚಿದ್ದು,ಸದ್ಯ6,878 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆಯುತ್ತಿದ್ದಾರೆ.</p><p>ಕೋವಿಡ್ ಪರೀಕ್ಷೆಗಳ ಸಂಖ್ಯೆ ಕಡಿಮೆಯಾಗಿದೆ. ಹಿಂದಿನ 24 ಗಂಟೆಗಳಲ್ಲಿ 56,825 ಮಾದರಿಗಳನ್ನಷ್ಟೇ ಪರೀಕ್ಷಿಸಲಾಗಿದೆ.</p><p>ಬೆಂಗಳೂರಿನಲ್ಲಿ ಹೊಸದಾಗಿ 131 ಜನರಿಗೆ ಸೋಂಕು ತಗುಲಿರುವುದು ಸೋಮವಾರ ದೃಢಪಟ್ಟಿದೆ. ದಕ್ಷಿಣ ಕನ್ನಡ ಮತ್ತು ಧಾರವಾಡದಲ್ಲಿ ತಲಾ 11, ಹಾಸನದಲ್ಲಿ 21, ಕೊಡಗು ಜಿಲ್ಲೆಯಲ್ಲಿ 14, ಮೈಸೂರಿನಲ್ಲಿ 15 ಹಾಗೂ ತುಮಕೂರಿನಲ್ಲಿ 23 ಪ್ರಕರಣಗಳು ವರದಿಯಾಗಿವೆ.</p></div></div>.<p><strong>ಓದಿ:</strong><a href="https://www.prajavani.net/karnataka-news/omicron-infection-suspect-in-bengaluru-model-sent-to-icmr-says-health-minister-k-sudhakar-888176.html" itemprop="url">ಬೆಂಗಳೂರಿನಲ್ಲಿ ಓಮಿಕ್ರಾನ್ ಸೋಂಕಿನ ಶಂಕೆ: ಐಸಿಎಂಆರ್ಗೆ ಮಾದರಿ ರವಾನೆ- ಸುಧಾಕರ್ </a></p>.<p>ಬಾಗಲಕೋಟೆ, ಬೆಳಗಾವಿ, ಬೀದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ಮಂಡ್ಯ, ರಾಯಚೂರು, ರಾಮನಗರ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ದಾಖಲಾಗಿಲ್ಲ. 9 ಜಿಲ್ಲೆಗಳಲ್ಲಿ ಇದು ಒಂದಂಕಿಯಷ್ಟಿದೆ.</p>.<p>ಬೆಂಗಳೂರಿನಲ್ಲಿ ಇಬ್ಬರು ಮೃತಪಟ್ಟಿದ್ದು, ಕೋಲಾರ, ತುಮಕೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ತಲಾ ಒಬ್ಬರು ಅಸುನೀಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳು ಇಳಿಮುಖವಾಗಿವೆ. ಸೋಮವಾರ257 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಈವರೆಗೆ ಸೋಂಕಿಗೊಳಪಟ್ಟವರ ಸಂಖ್ಯೆ 29.95 ಲಕ್ಷಕ್ಕೆ ಮುಟ್ಟಿದ್ದು,ಸೋಂಕು ದೃಢ ಪ್ರಮಾಣವು ಶೇ 0.45ಕ್ಕೆ ತಗ್ಗಿದೆ.</p>.<div class="field-items"><div class="field-item even"><p>ಕೋವಿಡ್ ಪೀಡಿತರ ಪೈಕಿ ಮತ್ತೆ 5 ಮಂದಿ ಅಸುನೀಗಿದ್ದಾರೆ. ಹೀಗಾಗಿ ಮೃತರ ಒಟ್ಟು ಸಂಖ್ಯೆ38,203ಕ್ಕೆ ಏರಿದೆ. ಮರಣ ಪ್ರಮಾಣ ದರವು ಶೇ1.94ರಷ್ಟಿದೆ.</p><p>ಒಂದು ದಿನದಲ್ಲಿ205 ಜನರಿಗೆ ಕಾಯಿಲೆ ವಾಸಿಯಾಗಿದೆ. ಈವರೆಗೆ ಚೇತರಿಸಿಕೊಂಡವರ ಸಂಖ್ಯೆ 29.50 ಲಕ್ಷದಷ್ಟಿದೆ. ಸಕ್ರಿಯ ಪ್ರಕರಣಗಳು ಹೆಚ್ಚಿದ್ದು,ಸದ್ಯ6,878 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆಯುತ್ತಿದ್ದಾರೆ.</p><p>ಕೋವಿಡ್ ಪರೀಕ್ಷೆಗಳ ಸಂಖ್ಯೆ ಕಡಿಮೆಯಾಗಿದೆ. ಹಿಂದಿನ 24 ಗಂಟೆಗಳಲ್ಲಿ 56,825 ಮಾದರಿಗಳನ್ನಷ್ಟೇ ಪರೀಕ್ಷಿಸಲಾಗಿದೆ.</p><p>ಬೆಂಗಳೂರಿನಲ್ಲಿ ಹೊಸದಾಗಿ 131 ಜನರಿಗೆ ಸೋಂಕು ತಗುಲಿರುವುದು ಸೋಮವಾರ ದೃಢಪಟ್ಟಿದೆ. ದಕ್ಷಿಣ ಕನ್ನಡ ಮತ್ತು ಧಾರವಾಡದಲ್ಲಿ ತಲಾ 11, ಹಾಸನದಲ್ಲಿ 21, ಕೊಡಗು ಜಿಲ್ಲೆಯಲ್ಲಿ 14, ಮೈಸೂರಿನಲ್ಲಿ 15 ಹಾಗೂ ತುಮಕೂರಿನಲ್ಲಿ 23 ಪ್ರಕರಣಗಳು ವರದಿಯಾಗಿವೆ.</p></div></div>.<p><strong>ಓದಿ:</strong><a href="https://www.prajavani.net/karnataka-news/omicron-infection-suspect-in-bengaluru-model-sent-to-icmr-says-health-minister-k-sudhakar-888176.html" itemprop="url">ಬೆಂಗಳೂರಿನಲ್ಲಿ ಓಮಿಕ್ರಾನ್ ಸೋಂಕಿನ ಶಂಕೆ: ಐಸಿಎಂಆರ್ಗೆ ಮಾದರಿ ರವಾನೆ- ಸುಧಾಕರ್ </a></p>.<p>ಬಾಗಲಕೋಟೆ, ಬೆಳಗಾವಿ, ಬೀದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ಮಂಡ್ಯ, ರಾಯಚೂರು, ರಾಮನಗರ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ದಾಖಲಾಗಿಲ್ಲ. 9 ಜಿಲ್ಲೆಗಳಲ್ಲಿ ಇದು ಒಂದಂಕಿಯಷ್ಟಿದೆ.</p>.<p>ಬೆಂಗಳೂರಿನಲ್ಲಿ ಇಬ್ಬರು ಮೃತಪಟ್ಟಿದ್ದು, ಕೋಲಾರ, ತುಮಕೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ತಲಾ ಒಬ್ಬರು ಅಸುನೀಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>