ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: ಕೋವಿಡ್ ಪಾಸಿಟಿವಿಟಿ ದರ ಶೇ 7.7ಕ್ಕೆ ಇಳಿಕೆ

ಈ ದಿನದ ಕೋವಿಡ್–19 ಮಾಹಿತಿ
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ 24 ಗಂಟೆಗಳ ಅವಧಿಯಲ್ಲಿ 12,209 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಸೋಂಕು ದೃಢ ಪ್ರಮಾಣವು ಶೇ 7.71ಕ್ಕೆ ಇಳಿಕೆಯಾಗಿದೆ.

ಕಳೆದ ತಿಂಗಳು ಮೊದಲೆರಡು ವಾರ ರಾಜ್ಯದಲ್ಲಿ ಈ ಪ್ರಮಾಣವು ಶೇ 40ರ ಗಡಿಯ ಆಸುಪಾಸಿಗೆ ಏರಿಕೆಯಾಗಿತ್ತು. ಸೋಂಕು ದೃಢ ಪ್ರಮಾಣ ದರವು ಶೇ 5ಕ್ಕೆ ಹಾಗೂ ಮರಣ ಪ್ರಮಾಣ ದರವು ಶೇ 1ಕ್ಕೆ ಇಳಿಕೆಯಾಗುವವರೆಗೂ ಲಾಕ್‌ಡೌನ್ ಮುಂದುವರಿಸಬೇಕೆಂದು ಕೋವಿಡ್‌ ತಾಂತ್ರಿಕ ಸಲಹಾ ಸಮಿತಿಯು ಸರ್ಕಾರಕ್ಕೆ ಶಿಫಾರಸು ಮಾಡಿತ್ತು.

ರಾಜ್ಯದಲ್ಲಿ ಕೊರೊನಾ ಸೋಂಕಿತರಲ್ಲಿ 320 ಮಂದಿ ಸಾವಿಗೀಡಾಗಿರುವುದು ಭಾನುವಾರ ಖಚಿತಪಟ್ಟಿದೆ. ಮರಣ ಪ್ರಮಾಣ ದರ ಶೇ 2.62ರಷ್ಟು ವರದಿಯಾಗಿದೆ.

ಈವರೆಗೆ ಮೃತಪಟ್ಟವರ ಒಟ್ಟು ಸಂಖ್ಯೆ 31,580ಕ್ಕೆ ಏರಿಕೆಯಾಗಿದೆ. ಪರೀಕ್ಷೆಗಳ ಸಂಖ್ಯೆ ಮತ್ತೆ ಏರುಗತಿ ಪಡೆದುಕೊಂಡಿದೆ. ಒಂದು ದಿನದ ಅವಧಿಯಲ್ಲಿ 1.58 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ.

ಈವರೆಗೆ ಕೋವಿಡ್ ಪೀಡಿತರಾದವರ ಸಂಖ್ಯೆ 26.95 ಲಕ್ಷ ದಾಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿಕೆ ಕಂಡಿದ್ದು, ಸದ್ಯ 2.54 ಲಕ್ಷ ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಸೋಂಕಿತರಲ್ಲಿ 25,659 ಮಂದಿಗೆ ಕಾಯಿಲೆ ವಾಸಿಯಾಗಿದೆ. ಈವರೆಗೆ ಗುಣಮುಖರಾದವರ ಒಟ್ಟು ಸಂಖ್ಯೆ 24.09 ಲಕ್ಷ ದಾಟಿದೆ.

ರಾಜ್ಯದ 27 ಜಿಲ್ಲೆಗಳಲ್ಲಿ ಹೊಸದಾಗಿ ಮರಣ ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ 187 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಮೈಸೂರಿನಲ್ಲಿ 19 ಮಂದಿ, ಬೆಳಗಾವಿಯಲ್ಲಿ 15 ಮಂದಿ ಸಾವಿಗೀಡಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ 10 ಕ್ಕಿಂತ ಕಡಿಮೆ ಸಂಖ್ಯೆಯಲ್ಲಿ ಮರಣ ಪ್ರಕರಣಗಳು ವರದಿಯಾಗಿವೆ.

ಬೆಂಗಳೂರಿನಲ್ಲಿ 24 ಗಂಟೆಗಳ ಅವಧಿಯಲ್ಲಿ 2,944 ಮಂದಿ ಸೋಂಕಿತರಾಗಿರುವುದು ದೃಢಪಟ್ಟಿದೆ. ಮೈಸೂರಿನಲ್ಲಿ 1,237 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. 24 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು 500ಕ್ಕಿಂತ ಕಡಿಮೆ ವರದಿಯಾಗಿವೆ.

ಬೆಳಗಾವಿ (418), ದಕ್ಷಿಣ ಕನ್ನಡ (609), ಧಾರವಾಡ (262), ಹಾಸನ (655), ಮೈಸೂರು (1237) ಪ್ರಕರಣಗಳು ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT