ಬೆಂಗಳೂರು: ಕೋವಿಡ್ 4ನೇ ಅಲೆಯ ಆತಂಕದ ನಡುವೆ ರಾಜ್ಯದಲ್ಲಿ 5 ಕೋಟಿ 2ನೇ ಡೋಸ್ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ.
Karnataka crosses 5 crore second dose #vaccinations!
This couldn’t have been possible without the phenomenal efforts of health workers and district administration. Kudos to media’s efforts in busting myths about vaccinations and spreading awareness! pic.twitter.com/zc98Riktv2
5,01,76,111 ಎರಡನೇ ಡೋಸ್ ಲಸಿಕೆ ವಿತರಣೆ ಮಾಡಲಾಗಿದೆ. ಇನ್ನು, 5.39 ಕೋಟಿ ಮೊದಲ ಡೋಸ್ ವಿತರಣೆ ಮಾಡಲಾಗಿದ್ದು, 16 ಲಕ್ಷಕ್ಕೂ ಅಧಿಕ ಮುಂಜಾಗ್ರತಾ ಡೋಸ್ ವಿತರಿಸಲಾಗಿದೆ.
ಆರೋಗ್ಯ ಕಾರ್ಯಕರ್ತರು ಮತ್ತು ಜಿಲ್ಲಾಡಳಿತದ ಅಸಾಧಾರಣ ಪರಿಶ್ರಮದಿಂದ ಇದು ಸಾಧ್ಯವಾಗಿದೆ. ಜನರಲ್ಲಿ ಲಸಿಕೆ ಬಗೆಗಿನ ತಪ್ಪು ಕಲ್ಪನೆ ಹೋಗಲಾಡಿಸಿ ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದ ಮಾಧ್ಯಮಗಳಿಗೆ ಧನ್ಯವಾದ ಎಂದು ಸುಧಾಕರ್ ಹೇಳಿದ್ದಾರೆ.
ನಿನ್ನೆ ರಾಜ್ಯದಲ್ಲಿ 60 ಕೋವಿಡ್ ಹೊಸ ಪ್ರಕರಣಗಳು ದೃಢಪಟ್ಟಿದ್ದು, ಇದರಲ್ಲಿ 57 ಪ್ರಕರಣಗಳು ರಾಜಧಾನಿ ಬೆಂಗಳೂರಿನಲ್ಲೇ ವರದಿಯಾಗಿದ್ದವು. ಸಕ್ರಿಯ ಪ್ರಕರಣಗಳ ಸಂಖ್ಯೆ 1676ಕ್ಕೆ ಜಿಗಿದಿದೆ.
ಇನ್ನು, ದೇಶದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆಯೂ ಏರುಗತಿಯಲ್ಲಿದ್ದು, ಕಳೆದ 24 ಗಂಟೆಗಳಲ್ಲಿ 2,541 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 16,522 ಕ್ಕೆ ಏರಿದೆ.