‘ಅಡುಗೆ ಅನಿಲದ ಬೆಲೆ ಹತ್ತು ಪೈಸೆ ಹೆಚ್ಚಾದಾಗ ಯಡಿಯೂರಪ್ಪ ಹಾಗೂ ಶೋಭಾ ಕರಂದ್ಲಾಜೆ ಅವರು ತಲೆ ಮೇಲೆ ಸಿಲಿಂಡರ್, ಸ್ಟೌ ಇಟ್ಟುಕೊಂಡು ಓಡಾಡಿದ್ರು. ಗುಜರಾತ್ ಮುಖ್ಯಮಂತ್ರಿಯಾಗಿದ್ದ ಮೋದಿ, ‘ಮತ ಹಾಕುವಾಗ ಗ್ಯಾಸ್ ಸಿಲಿಂಡರ್ ಬೆಲೆ ಜ್ಞಾಪಕ ಮಾಡಿಕೊಂಡು ಮತ ಹಾಕಿ’ ಎಂದು ಹೇಳಿದ್ದರು. ಈಗ ಗ್ಯಾಸ್ ಸಿಲಿಂಡರ್, ಹಾಲು, ಬೇಳೆ, ಎಣ್ಣೆ ಬೆಲೆ ಹೆಚ್ಚಾಗಿದೆ. ಅವರೆಲ್ಲ ಏಕೆ ಸುಮ್ಮನಿದ್ದಾರೆ’ ಎಂದು ಪ್ರಶ್ನಿಸಿದರು.