ದಾವಣಗೆರೆ: ‘ಕರ್ನಾಟಕದಲ್ಲಿರುವ 20 ಪರ್ಸೆಂಟ್ ಸರ್ಕಾರವನ್ನು ಕಿತ್ತೊಗೆದು ನಮಗೆ ಅಧಿಕಾರ ಕೊಡಿ. ಭ್ರಷ್ಟಾಚಾರ ಇಲ್ಲದಂತೆ ಮಾಡುತ್ತೇವೆ. ಡಬಲ್ ಎಂಜಿನ್ ಸರ್ಕಾರ ತರುತ್ತೇವೆ ಎಂದು ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ಮೋದಿ ಭರವಸೆ ನೀಡಿದ್ದರು. ಅದನ್ನು ನಂಬಿದ ಜನ ಅಧಿಕಾರವನ್ನೂ ನೀಡಿದರು. ಆದರೆ, ಡಬಲ್ ಎಂಜಿನ್ ಸರ್ಕಾರದಿಂದಾಗಿ ಭ್ರಷ್ಟಾಚಾರ ದ್ವಿಗುಣಗೊಂಡು, 20 ಪರ್ಸೆಂಟ್ನಿಂದ 40 ಪರ್ಸೆಂಟ್ಗೆ ಹೆಚ್ಚಿತು’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟೀಕಿಸಿದರು.