ಪ್ರಧಾನಮಂತ್ರಿ ಆವಾಸ್ ಯೋಜನೆ, ಆಯುಷ್ಮಾನ್ ಭಾರತ– ಆರೋಗ್ಯ ಕರ್ನಾಟಕ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್, ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನ, ಮತ್ಸ್ಯ ಸಿರಿ ಸೇರಿದಂತೆ ಹಲವು ಮಹತ್ವದ ಯೋಜನೆಗಳು ಈ ಸರ್ಕಾರದ ಅವಧಿಯಲ್ಲಿ ಅನುಷ್ಠಾನಗೊಂಡಿವೆ. ಈ ಯೋಜನೆಗಳಿಂದ ಜನರ ಬದುಕಿನಲ್ಲಿ ಆಗಿರುವ ಬದಲಾವಣೆಗಳನ್ನು ಗುರುತಿಸುವುದು ಈ ಅಭಿಯಾನದ ಮುಖ್ಯ ಗುರಿ ಎಂದರು.