ಕೆಆರ್ಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಜ್ಞಾನಸಿಂಧು ಸ್ವಾಮಿ, ‘ನಾಡಿನ ಜನರು ಅನೇಕ ಸಮಸ್ಯೆಗಳನ್ನು
ಎದುರಿಸುತ್ತಿದ್ದಾರೆ. ನಾಗರಿಕತೆ ಬೆಳೆಯುತ್ತಾ ಉಳ್ಳವರು ಸುಳ್ಳು, ಮೋಸಗಳನ್ನು ಕಲಿತಿದ್ದಾರೆ. ಭ್ರಷ್ಟ ಜೆಸಿಬಿ (ಜೆಡಿಎಸ್, ಕಾಂಗ್ರೆಸ್, ಬಿಜೆಪಿ) ಪಕ್ಷಗಳು ಲೂಟಿ ಮಾಡುತ್ತಿವೆ. ನಾವು ಅಧಿಕಾರಕ್ಕೆ ಬಂದರೆ ಉಚಿತವಾಗಿ ಶಿಕ್ಷಣ, ಆರೋಗ್ಯ ನೀಡಿ, ಸರ್ಕಾರಿ ಕಚೇರಿಗಳನ್ನು ಲಂಚ ಮುಕ್ತ ಮತ್ತು ಪಾರದರ್ಶಕವಾಗಿ ನಡೆಸುತ್ತೇವೆ’ ಎಂದು ತಿಳಿಸಿದರು.