‘ಗೋವುಗಳು ಮತ್ತು ಶ್ರೀಮಂತ ಭಾರತೀಯ ಸಂಸ್ಕೃತಿಯನ್ನು ನಾಶ ಮಾಡುವ ಬಗ್ಗೆ ಕಾಂಗ್ರೆಸ್ ನಾಯಕರು ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಬಿಜೆಪಿ ಸರ್ಕಾರ ಹೈನುಗಾರಿಕೆಯಲ್ಲಿ ಕ್ರಾಂತಿ ಮಾಡಿದೆ. ಆದರೆ, ಗೋಸಂಪತ್ತಿನ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷದ ಕೊಡುಗೆ ಏನು’ ಎಂದು ಪ್ರಶ್ನಿಸಿದ ಅವರು, ‘ಕಸಾಯಿಖಾನೆಗಳನ್ನು ನಡೆಸಿಕೊಂಡು ಬಂದಿದ್ದೇ ಕಾಂಗ್ರೆಸ್ ನಾಯಕರ ಸಾಧನೆಯಾಗಿದೆ. ಜನ
ತಮ್ಮನ್ನು ಮರೆತು ಬಿಡುತ್ತಾರೆ ಎನ್ನುವ ಕಾರಣಕ್ಕೆ ಗೋಹತ್ಯೆ ನಿಷೇಧ ವಾಪಸ್ ಮಾಡುವುದಾಗಿ ಹೇಳಿಕೊಂಡು ತಿರುಗಾಡುತ್ತಿದ್ದಾರೆ’ ಎಂದು ಸಚಿವರು ಹೇಳಿದರು.