ಸರ್ಕಾರದ ತಪ್ಪುಗಳ ಬಗ್ಗೆ ಚರ್ಚಿಸಲು ಸದನದಲ್ಲಿ ಅವಕಾಶವನ್ನೇ ಕೊಡಲಿಲ್ಲ ಎಂದು ಸಿದ್ದರಾಮಯ್ಯ ಹೇಳಿರುವುದು ಹಾಸ್ಯಾಸ್ಪದ ಸಂಗತಿಯಾಗಿದೆ. ಸರ್ಕಾರವನ್ನು ಸರಿಯಾಗಿ ತಿದ್ದುವುದೇ ಪ್ರತಿಪಕ್ಷಗಳ ಕರ್ತವ್ಯವಾಗಿದೆ. ಆದರೆ ಅವರು ಸದನದಲ್ಲಿ ಸುಮ್ಮನಿದ್ದು, ಈಗ ಬೀದಿಯಲ್ಲಿ ನಿಂತುಕೊಂಡು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಅವರು ಟೀಕಿಸಿದರು.