<p><strong>ಹಾಸನ: </strong>‘ಜಿಲ್ಲೆಯಲ್ಲಿ 25 ವರ್ಷಗಳಿಂದ ರಾಜಕೀಯ ಮಾಡುತ್ತಿದ್ದೇನೆ. ಜಿಲ್ಲೆ ಏನು ಎಂಬುದು ನನಗೆ ಗೊತ್ತಿದೆ. ನಮ್ಮ ಮುಖಂಡರ ಜೊತೆಗೆ ಕುಳಿತು ಮಾತನಾಡುತ್ತೇನೆ. ಇದರಲ್ಲಿ ಯಾವುದೇ ದಾಕ್ಷಿಣ್ಯ ಇಲ್ಲ. ಹೆದರಿಕೊಂಡು ಓಡಿ ಹೋಗಲ್ಲ. ಜಿಲ್ಲೆಯಲ್ಲಿ ಈ ಬಾರಿ ನನಗೆ ಅಗ್ನಿಪರೀಕ್ಷೆ ನಡೆಯಲಿದೆ’ ಎಂದು ಶಾಸಕ ಎಚ್.ಡಿ. ರೇವಣ್ಣ ಹೇಳಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿ, ‘ರೇವಣ್ಣ ಜಿಲ್ಲೆಗೆ ದುಡಿದಿದ್ದಾನೆ ಎಂದರೆ ಜಿಲ್ಲೆಯ ಜನ ನನ್ನ ಕೈಹಿಡಿಯಲಿ. ಇಲ್ಲವೆಂದರೆ, ಅವರೇ ತೀರ್ಮಾನಿಸಲಿ. ಕಾರ್ಯಕರ್ತರೆಲ್ಲ ಒಟ್ಟಾಗಿದ್ದೇವೆ. ಹಾಸನದಲ್ಲಿ ಸಮರ್ಥ ನಾಯಕರಿಲ್ಲ ಎಂದು ತಿಳಿದುಕೊಳ್ಳಬೇಡಿ’ ಎಂದರು.</p>.<p>ಹಾಸನ ಟಿಕೆಟ್ ಆಕಾಂಕ್ಷಿ ಎಚ್.ಪಿ. ಸ್ವರೂಪ್ ಅವರು ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಕುರಿತಂತೆ, ‘ಅವರು ಯಾರೆಂದು ಗೊತ್ತಿಲ್ಲ. ಹಾಸನ ಕ್ಷೇತ್ರದಲ್ಲಿ ಸಾಮಾನ್ಯ ಕಾರ್ಯಕರ್ತ<br />ನನ್ನು ನಿಲ್ಲಿಸುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ. ಆ ಸಾಮಾನ್ಯ ಕಾರ್ಯಕರ್ತ ಯಾರು ಎಂದು ನೋಡೋಣ’ ಎಂದಷ್ಟೇ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>‘ಜಿಲ್ಲೆಯಲ್ಲಿ 25 ವರ್ಷಗಳಿಂದ ರಾಜಕೀಯ ಮಾಡುತ್ತಿದ್ದೇನೆ. ಜಿಲ್ಲೆ ಏನು ಎಂಬುದು ನನಗೆ ಗೊತ್ತಿದೆ. ನಮ್ಮ ಮುಖಂಡರ ಜೊತೆಗೆ ಕುಳಿತು ಮಾತನಾಡುತ್ತೇನೆ. ಇದರಲ್ಲಿ ಯಾವುದೇ ದಾಕ್ಷಿಣ್ಯ ಇಲ್ಲ. ಹೆದರಿಕೊಂಡು ಓಡಿ ಹೋಗಲ್ಲ. ಜಿಲ್ಲೆಯಲ್ಲಿ ಈ ಬಾರಿ ನನಗೆ ಅಗ್ನಿಪರೀಕ್ಷೆ ನಡೆಯಲಿದೆ’ ಎಂದು ಶಾಸಕ ಎಚ್.ಡಿ. ರೇವಣ್ಣ ಹೇಳಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿ, ‘ರೇವಣ್ಣ ಜಿಲ್ಲೆಗೆ ದುಡಿದಿದ್ದಾನೆ ಎಂದರೆ ಜಿಲ್ಲೆಯ ಜನ ನನ್ನ ಕೈಹಿಡಿಯಲಿ. ಇಲ್ಲವೆಂದರೆ, ಅವರೇ ತೀರ್ಮಾನಿಸಲಿ. ಕಾರ್ಯಕರ್ತರೆಲ್ಲ ಒಟ್ಟಾಗಿದ್ದೇವೆ. ಹಾಸನದಲ್ಲಿ ಸಮರ್ಥ ನಾಯಕರಿಲ್ಲ ಎಂದು ತಿಳಿದುಕೊಳ್ಳಬೇಡಿ’ ಎಂದರು.</p>.<p>ಹಾಸನ ಟಿಕೆಟ್ ಆಕಾಂಕ್ಷಿ ಎಚ್.ಪಿ. ಸ್ವರೂಪ್ ಅವರು ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಕುರಿತಂತೆ, ‘ಅವರು ಯಾರೆಂದು ಗೊತ್ತಿಲ್ಲ. ಹಾಸನ ಕ್ಷೇತ್ರದಲ್ಲಿ ಸಾಮಾನ್ಯ ಕಾರ್ಯಕರ್ತ<br />ನನ್ನು ನಿಲ್ಲಿಸುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ. ಆ ಸಾಮಾನ್ಯ ಕಾರ್ಯಕರ್ತ ಯಾರು ಎಂದು ನೋಡೋಣ’ ಎಂದಷ್ಟೇ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>