ಏಪ್ರಿಲ್ ಕೊನೆ ಅಥವಾ ಮೇ ತಿಂಗಳ ಮೊದಲ ವಾರದಲ್ಲಿ ಚುನಾವಣೆ ನಡೆಯಲಿದೆ. ಅಭ್ಯರ್ಥಿಗಳನ್ನು ಮೊದಲೇ ಘೋಷಿಸಿ, ಪ್ರಚಾರಕ್ಕೆ ಹೆಚ್ಚಿನ ಸಮಯ ನೀಡುವ ಬಗ್ಗೆ ಈಗಾಗಲೇ ಚರ್ಚೆ ನಡೆದಿದೆ. ಆದರೆ, ಕೆಲವು ಕ್ಷೇತ್ರಗಳಲ್ಲಿ ಆಕಾಂಕ್ಷಿಗಳು ಟಿಕೆಟ್ ಗಿಟ್ಟಿಸಿಕೊಳ್ಳಲು ಪೈಪೋಟಿಗಿಳಿದಿದ್ದು, ಈ ವಿಚಾರವೂ ವರಿಷ್ಠರ ಗಮನದಲ್ಲಿದೆ. ಟಿಕೆಟ್ ಘೋಷಣೆಯಾದ ಬೆನ್ನಲ್ಲೆ, ಯಾವುದೇ ಭಿನ್ನಮತಕ್ಕೆ ಅವಕಾಶ ಇಲ್ಲದೆ ಕ್ಷೇತ್ರದ ಇತರ ಆಕಾಂಕ್ಷಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಹೊಣೆಗಾರಿಕೆಯನ್ನೂ ಅಭ್ಯರ್ಥಿಗೆ ನೀಡುವ ಬಗ್ಗೆಯೂ ಪಕ್ಷದ ವಲಯದಲ್ಲಿ ಚರ್ಚೆ ನಡೆದಿದೆ ಎಂದೂ ಮೂಲಗಳು ಹೇಳಿವೆ.