ನಗರದ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಗುರುವಾರ ನಡೆದ ‘ಪ್ರಜಾಧ್ವನಿ ಯಾತ್ರೆ’ಯಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ಗುತ್ತಿಗೆದಾರರಿಗೆ ಕೊಡಬೇಕಾದ ₹25 ಸಾವಿರ ಕೋಟಿಯನ್ನು ಸರ್ಕಾರ ಬಾಕಿ ಉಳಿಸಿಕೊಂಡಿದೆ. ರಾಜ್ಯದ ಜನರ ಮೇಲೆ ತೆರಿಗೆ ಭಾರ ಹಾಕಲಾಗಿದೆ. ರಾಜ್ಯದ ಸಾಲದ ಹೊರೆ ದುಪ್ಪಟ್ಟಾಗಿದೆ. ಸಾಲ ಮಾಡಿ ಹೋಳಿಗೆ ತಿನ್ನೋಕೆ ಶುರು ಮಾಡಿಕೊಂಡಿದ್ದೀರಲ್ರೀ ಬೊಮ್ಮಾಯಿ’ ಎಂದು ವಾಗ್ದಾಳಿ ನಡೆಸಿದರು.