ಶ್ರೀರಂಗಪಟ್ಟಣ (ಮಂಡ್ಯ): ‘ಮುಂಬರುವ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಇನ್ನೂ ಆಲೋಚನೆ ಮಾಡಿಲ್ಲ’ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ತಾಲ್ಲೂಕಿನ ಟಿ.ಎಂ.ಹೊಸೂರು ಮತ್ತು ಕಾಳೇನಹಳ್ಳಿಯಲ್ಲಿ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು ಹಮ್ಮಿಕೊಂಡಿದ್ದ, ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.