24 ರಂದು ತುಮಕೂರು ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ, 26 ರಂದು ಮೈಸೂರು ಹಾಗೂ ಚಾಮರಾಜನಗರ, 27 ರಂದು ಮಂಡ್ಯ ಹಾಗೂ ರಾಮನಗರ, 28 ರಂದು ಯಾದಗಿರಿ ಹಾಗೂ ಬೀದರ್ ಯಾತ್ರೆ ನಡೆಯಲಿದೆ. ಉತ್ತರ ಕನ್ನಡ, ರಾಯಚೂರು, ಕೊಡಗು ಹಾಗೂ ಬಳ್ಳಾರಿ ಭಾಗದ ಪ್ರವಾಸದ ಬಗ್ಗೆ ಪ್ರತ್ಯೇಕವಾಗಿ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.