ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಸ್ಲಿಮರಿಗೆ ಸಿ.ಎಂ ಪಟ್ಟ ನೀಡಲು ಮುಕ್ತ: ಕುಮಾರಸ್ವಾಮಿ

Last Updated 23 ನವೆಂಬರ್ 2022, 2:35 IST
ಅಕ್ಷರ ಗಾತ್ರ

ಕೋಲಾರ: ‘ಜೆಡಿಎಸ್‌ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದರೆ ಮುಸ್ಲಿಂ ಸಮುದಾಯಕ್ಕೆ ಮುಖ್ಯಮಂತ್ರಿ ಪಟ್ಟ ನೀಡುವ ಮುಕ್ತ ಅವಕಾಶ ನಮ್ಮ ಪಕ್ಷದಲ್ಲಿದೆ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಮಂಗಳವಾರ ತಾಲ್ಲೂಕಿನ ಕ್ಯಾಲನೂರಿನಲ್ಲಿ ಗ್ರಾಮ ವಾಸ್ತವ್ಯದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕುಮಾರಸ್ವಾಮಿ ದೆಹಲಿಗೆ ಹೋದರೆ ತಾವೇ ಮುಖ್ಯಮಂತ್ರಿ ಆಗಬಹುದೆಂದು ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ. ಈ ರೀತಿ ಚರ್ಚೆ ಮಾಡಲು ಅವಕಾಶ ಇರುವುದು ನಮ್ಮ ಪಕ್ಷದಲ್ಲಿ ಮಾತ್ರ’ ಎಂದರು.

‘ಮುಸ್ಲಿಮರೂ ನಮ್ಮವರೇ. ಅವರೂ ಕನ್ನಡಿಗರು. ಆ ಸಮುದಾಯದವರನ್ನು ಮುಖ್ಯಮಂತ್ರಿ ಮಾಡಬಾರದೆಂದೇನೂ ಇಲ್ಲ. ಒಬ್ಬ ವ್ಯಕ್ತಿಗೆ ಅವಕಾಶ ನೀಡುವ ಪ್ರಶ್ನೆ ಇದಲ್ಲ. ಆ ಸಮುದಾಯಗಳಲ್ಲಿನ ಸಮಸ್ಯೆಗೆ ಪರಿಹಾರ ಸಿಗಬೇಕು’ ಎಂದರು.

‘ದಲಿತರು ಹಾಗೂ ಮಹಿಳೆಯರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲು ಸಿದ್ಧ. ದಲಿತರ ಮತ ಪಡೆಯಲು ಈ ಘೋಷಣೆ ಮಾಡಿಲ್ಲ. ಇದು ಸ್ವಯಂ ಪ್ರೇರಣೆಯಿಂದ ಮಾಡಿದ ಘೋಷಣೆ ಅಲ್ಲ. ಆ ಸಮುದಾಯದ ಯುವಕನೊಬ್ಬ ತಾನು ಎದುರಿಸಿರುವ ಸಮಸ್ಯೆ ಹೇಳಿಕೊಂಡ. ಎಲ್ಲಾ ರಾಜಕೀಯ ಪಕ್ಷಗಳು ದಲಿತರನ್ನು ಅಸಡ್ಡೆಯಿಂದ ನೋಡುತ್ತಿರುವುದಾಗಿ ಬೇಸರ ವ್ಯಕ್ತಪಡಿಸಿದ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT