<p><strong>ಲಿಂಗಸುಗೂರು:</strong> ಕೃಷ್ಣಾ ನದಿಯ ಪ್ರವಾಹದಿಂದ ನಡುಗಡ್ಡೆ ಮ್ಯಾದರಗಡ್ಡಿಯಲ್ಲಿ ಸಿಲುಕಿದ್ದ ನಾಲ್ವರನ್ನು ಜಿಲ್ಲಾಡಳಿತದ ಅಧಿಕಾರಿಗಳು ರಕ್ಷಿಸಿ ಬೋಟ್ ಮೂಲಕ ಸುರಕ್ಷಿತ ಸ್ಥಳಕ್ಕೆ ಕರೆತಂದಿದ್ದಾರೆ. ಆದರೆ ನಡುಗಡ್ಡೆ ನಿವಾಸಿಗಳು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.</p>.<p>‘ಪ್ರವಾಹದ ಸಂದರ್ಭದಲ್ಲಿ ನಮ್ಮನ್ನು ಹೀಗೆ ರಕ್ಷಿಸುತ್ತೀರಿ. ಆದರೆ ಸ್ಥಳಾಂತರ ಮಾಡಿದ ಕಡೆಯಲ್ಲಿ ನಮಗೆ ಬದುಕಲು ವ್ಯವಸ್ಥೆ ಮಾಡುವುದಿಲ್ಲ. ನಮ್ಮನ್ನು ಪುನಃ ನಡುಗಡ್ಡೆಗೆ ಬಿಟ್ಟು ಬಿಡಿ’ ಎಂದು ನಾಲ್ವರು ಪಟ್ಟು ಹಿಡಿದರು.</p>.<p>‘15 ವರ್ಷಗಳಿಂದ ಅಧಿಕಾರಿಗಳು, ಜನಪ್ರತಿನಿಧಿಗಳು ಹುಸಿ ಭರವಸೆ ನೀಡುತ್ತಿದ್ದಾರೆ. ಶಾಶ್ವತ ಪುನರ್ವಸತಿ ಕಲ್ಪಿಸುವ ಬದಲು ನಮ್ಮನ್ನು ತಾತ್ಕಾಲಿಕ ಪರಿಹಾರ ಕೇಂದ್ರದಲ್ಲಿ ಇರಿಸಲಾಗುತ್ತದೆ. ಸ್ಥಳಾಂತರ ಮಾಡಿದ ಕಡೆ ಮನೆ, ಜಮೀನು ಕೊಡಿ’ ಎಂದು ಕುಟುಂಬಸ್ಥರಾದ ದೊಡ್ಡಮಲ್ಲಪ್ಪ, ಯಲ್ಲಮ್ಮ, ದೇವಮ್ಮ, ರಾಧಿಕಾ ಹೇಳಿದರು.</p>.<p>‘ನಡುಗಡ್ಡೆಯಲ್ಲಿ ಇನ್ನೂ 10 ಮಂದಿ ಇದ್ದಾರೆ. ಅವರನ್ನೂ ಸಹ ಸುರಕ್ಷಿತ ಸ್ಥಳಕ್ಕೆ ಕರೆತರುವ ಉದ್ದೇಶವಿತ್ತು. ಆದರೆ, ನಡುಗಡ್ಡೆಯಲ್ಲಿ ಸಿಲುಕಿದವರೇ ಆಕ್ಷೇಪಿಸಿದ್ದರಿಂದ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದೇವೆ’ ಎಂದು ಉಪ ವಿಭಾಗಾಧಿಕಾರಿ ರಾಜಶೇಖರ ಡಂಬಳ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಿಂಗಸುಗೂರು:</strong> ಕೃಷ್ಣಾ ನದಿಯ ಪ್ರವಾಹದಿಂದ ನಡುಗಡ್ಡೆ ಮ್ಯಾದರಗಡ್ಡಿಯಲ್ಲಿ ಸಿಲುಕಿದ್ದ ನಾಲ್ವರನ್ನು ಜಿಲ್ಲಾಡಳಿತದ ಅಧಿಕಾರಿಗಳು ರಕ್ಷಿಸಿ ಬೋಟ್ ಮೂಲಕ ಸುರಕ್ಷಿತ ಸ್ಥಳಕ್ಕೆ ಕರೆತಂದಿದ್ದಾರೆ. ಆದರೆ ನಡುಗಡ್ಡೆ ನಿವಾಸಿಗಳು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.</p>.<p>‘ಪ್ರವಾಹದ ಸಂದರ್ಭದಲ್ಲಿ ನಮ್ಮನ್ನು ಹೀಗೆ ರಕ್ಷಿಸುತ್ತೀರಿ. ಆದರೆ ಸ್ಥಳಾಂತರ ಮಾಡಿದ ಕಡೆಯಲ್ಲಿ ನಮಗೆ ಬದುಕಲು ವ್ಯವಸ್ಥೆ ಮಾಡುವುದಿಲ್ಲ. ನಮ್ಮನ್ನು ಪುನಃ ನಡುಗಡ್ಡೆಗೆ ಬಿಟ್ಟು ಬಿಡಿ’ ಎಂದು ನಾಲ್ವರು ಪಟ್ಟು ಹಿಡಿದರು.</p>.<p>‘15 ವರ್ಷಗಳಿಂದ ಅಧಿಕಾರಿಗಳು, ಜನಪ್ರತಿನಿಧಿಗಳು ಹುಸಿ ಭರವಸೆ ನೀಡುತ್ತಿದ್ದಾರೆ. ಶಾಶ್ವತ ಪುನರ್ವಸತಿ ಕಲ್ಪಿಸುವ ಬದಲು ನಮ್ಮನ್ನು ತಾತ್ಕಾಲಿಕ ಪರಿಹಾರ ಕೇಂದ್ರದಲ್ಲಿ ಇರಿಸಲಾಗುತ್ತದೆ. ಸ್ಥಳಾಂತರ ಮಾಡಿದ ಕಡೆ ಮನೆ, ಜಮೀನು ಕೊಡಿ’ ಎಂದು ಕುಟುಂಬಸ್ಥರಾದ ದೊಡ್ಡಮಲ್ಲಪ್ಪ, ಯಲ್ಲಮ್ಮ, ದೇವಮ್ಮ, ರಾಧಿಕಾ ಹೇಳಿದರು.</p>.<p>‘ನಡುಗಡ್ಡೆಯಲ್ಲಿ ಇನ್ನೂ 10 ಮಂದಿ ಇದ್ದಾರೆ. ಅವರನ್ನೂ ಸಹ ಸುರಕ್ಷಿತ ಸ್ಥಳಕ್ಕೆ ಕರೆತರುವ ಉದ್ದೇಶವಿತ್ತು. ಆದರೆ, ನಡುಗಡ್ಡೆಯಲ್ಲಿ ಸಿಲುಕಿದವರೇ ಆಕ್ಷೇಪಿಸಿದ್ದರಿಂದ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದೇವೆ’ ಎಂದು ಉಪ ವಿಭಾಗಾಧಿಕಾರಿ ರಾಜಶೇಖರ ಡಂಬಳ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>