ತಮ್ಮ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರದಿದ್ದರೂ ಆಂಧ್ರ ಪ್ರದೇಶ, ದೆಹಲಿ, ಕೇರಳ ಮುಂತಾದ ರಾಜ್ಯಗಳು ಜನಪರವಾದ ಪ್ಯಾಕೇಜ್ಗಳನ್ನು ಘೋಷಿಸಿವೆ. ಆ ರಾಜ್ಯಗಳ ಮುಂದೆ @BSYBJP ಅವರು ಘೋಷಣೆ ಮಾಡಿರುವ ಪ್ಯಾಕೇಜ್ ಏನೇನೂ ಅಲ್ಲ. ಇದು ಜನರ ಕಣ್ಣಿಗೆ ಮಣ್ಣೆರಚುವ ತಂತ್ರ. 13/14#Covid19
ತಮಿಳುನಾಡಿನಲ್ಲಿ 2 ಕೋಟಿಗೂ ಅಧಿಕ ಕುಟುಂಬಗಳಿಗೆ ತಲಾ 4 ಸಾವಿರ ರೂ.ಗಳ ಪ್ರಕಾರ ಸುಮಾರು 8,368 ಕೋಟಿ ರೂ. ಪರಿಹಾರದ ಪ್ಯಾಕೇಜ್ ಅನ್ನು ಘೋಷಿಸಲಾಗಿದೆ. ಬಡಜನರಿಗೆ ನೆರವಾಗುವ ಇಂಥಾ ಪ್ಯಾಕೇಜ್ ನಮ್ಮ ರಾಜ್ಯದಲ್ಲೂ ಅವಶ್ಯವಾಗಿ ಬೇಕಿತ್ತು. 11/14#Covid19
ಕಳೆದ ಬಾರಿ ಸವಿತಾ ಸಮಾಜದ ಶೇ. 50 ಜನರಿಗೂ ಪರಿಹಾರ ಸಿಗಲಿಲ್ಲ. ಅದೇ ರೀತಿ ರೈತರಿಗೆ, ಹೂ ಬೆಳೆಗಾರರಿಗೆ, ಹಣ್ಣು ಬೆಳಗಾರರಿಗೆ ಘೋಷಿಸಿದ್ದ ಪರಿಹಾರದ ಹಣ ಶೇ. 50 ರಷ್ಟು ಜನರನ್ನು ತಲುಪಿಲ್ಲ. ಈ ಬಾರಿಯಾದರೂ ರಾಜ್ಯ @BJP4Karnataka ಸರ್ಕಾರ ಇವರಿಗೆ ಸೂಕ್ತ ಪರಿಹಾರ ನೀಡಬೇಕಿತ್ತು. 10/14#Covid19
ಕಳೆದ ಬಾರಿಯ 2100 ಕೋಟಿ ರೂ.ಗಳ ಪ್ಯಾಕೇಜ್ನಲ್ಲಿ ಬಹುಪಾಲು ಹಣವನ್ನು ನೊಂದ ಜನರಿಗೆ ನೀಡಲೇ ಇಲ್ಲ. ಆಟೋ, ಕ್ಯಾಬ್, ಚಾಲಕರುಗಳಿಗೆ ಸಂಬಂಧಿಸಿದಂತೆ 7.75 ಲಕ್ಷ ಜನರಿಗೆ ತಲಾ 5 ಸಾವಿರ ಪರಿಹಾರ ಕೊಡುವುದಾಗಿ ಘೋಷಿಸಿ, ನೀಡಿದ್ದು, ಕೇವಲ 2.10 ಲಕ್ಷ ಜನರಿಗೆ ಮಾತ್ರ. 9/14#Covid19