ಸಚಿವ ಡಾ.ಕೆ.ಸುಧಾಕರ್, ‘ಒಂದೂವರೆ ವರ್ಷದಿಂದ ರಾಜ್ಯ ಸರ್ಕಾರ ಕೋವಿಡ್ ವಿರುದ್ಧ ಸಮರ್ಥವಾಗಿ ಹೋರಾಡುತ್ತಿದೆ. ಆಸ್ಪತ್ರೆಗಳಲ್ಲಿ ಹಾಸಿಗೆಗಳ ಹೆಚ್ಚಳ, ಆಮ್ಲಜನಕ ಘಟಕ ಸ್ಥಾಪನೆ ಹಾಗೂ ವೆಂಟಿಲೇಟರ್ ಸೌಲಭ್ಯ, ದಾಖಲೆ ಪ್ರಮಾಣದಲ್ಲಿ ಕೋವಿಡ್ ಲಸಿಕೆ ನೀಡಿರುವುದು ಕೋವಿಡ್ ನಿಯಂತ್ರಣಕ್ಕೆ ನೆರವಾಯಿತು. ಕೋವಿಡ್ ಪರೀಕ್ಷೆ ಹೆಚ್ಚಿಸಿ ಸೊಂಕಿತರನ್ನು ಪತ್ತೆ ಮಾಡಿ ಚಿಕಿತ್ಸೆ ನೀಡುವ ಮೂಲಕ ರೋಗವನ್ನು ನಿಯಂತ್ರಣಕ್ಕೆ ತರಲಾಯಿತು’ ಎಂದರು.