ವಿಚಾರಣೆ ವೇಳೆಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ, ‘ಏಕಸದಸ್ಯ ನ್ಯಾಯಪೀಠದ ಆದೇಶದಂತೆ ರಾಜ್ಯ ಸರ್ಕಾರ ಮೂವರು ಸಚಿವರನ್ನು ಒಳಗೊಂಡ ಸಚಿವ ಸಂಪುಟದ ಉಪ ಸಮಿತಿ ರಚಿಸಿದೆ. ಈ ಉಪ ಸಮಿತಿಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರ, ಗೃಹ ಹಾಗೂ ಮುಜರಾಯಿ ಇಲಾಖೆ ಸಚಿವರಿದ್ದಾರೆ. ಈ ಸಮಿತಿಯು ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿದ್ದು ಸಂಬಂಧಿಸಿದ ಪ್ರಮುಖರ ಜೊತೆ ಸಮಾಲೋಚನೆ ನಡೆಸಿದೆ’ ಎಂದರು.