<p><strong>ಬೆಂಗಳೂರು</strong>: ಜಾತಿವಾರು ನಿಗಮಗಳಲ್ಲಿ ಹೆಚ್ಚಿದ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.</p>.<p>‘ಬಡವರ ಹಣ: ಬಲಾಢ್ಯರ ಕಲ್ಯಾಣ’ ಎಂಬ ‘ಪ್ರಜಾವಾಣಿ’ ಒಳನೋಟ ವರದಿಯನ್ನು ಉಲ್ಲೇಖಿಸಿ ಕಾಂಗ್ರೆಸ್ ಟ್ವೀಟ್ ಮಾಡಿದೆ.</p>.<p>‘ಬಿಜೆಪಿ ಸರ್ಕಾರದಲ್ಲಿ ಶೇ 40 ಕಮಿಷನ್ ಭ್ರಷ್ಟಾಚಾರದ ಸೋಂಕು ಕೋವಿಡ್ಗಿಂತಲೂ ಅಪಾಯಕಾರಿಯಾಗಿ ವ್ಯಾಪಿಸಿದೆ’ ಎಂದು ಕೆಪಿಸಿಸಿ ಹರಿಹಾಯ್ದಿದೆ.</p>.<p>‘ನಿಗಮ, ಮಂಡಳಿಗಳಲ್ಲಿ ಬಿಜೆಪಿ ಭ್ರಷ್ಟೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಬಡವರ, ಹಿಂದುಳಿದವರ ಏಳಿಗೆಯ ಬದಲು ಭ್ರಷ್ಟರ ಏಳಿಗೆಯಾಗುತ್ತಿದೆ. ಬಡವರನ್ನು ತಲುಪಬೇಕಾದ ನೂರಾರು ಕೋಟಿ ಅನುದಾನ ಬಿಜೆಪಿ ಭ್ರಷ್ಟರ ತಿಜೋರಿ ಸೇರುತ್ತಿದೆ’ ಎಂದು ವಾಗ್ದಾಳಿ ನಡೆಸಿದೆ.</p>.<p>ಸಮಾಜ ಕಲ್ಯಾಣ ಇಲಾಖೆ ಸ್ವಯಂ ಕಲ್ಯಾಣ ಇಲಾಖೆಯಾಗಿದೆ.ಗಂಗಾ ಕಲ್ಯಾಣದಲ್ಲಿ ಭ್ರಷ್ಟರ ಕಲ್ಯಾಣ ಆಗುತ್ತಿರುವುದರಲ್ಲಿ ಆಶ್ಚರ್ಯವಿಲ್ಲ.ಇಲಾಖಾ ತನಿಖೆಯಲ್ಲಿ ಮೇಲ್ನೋಟದಲ್ಲೇ ಹಗರಣ ಸಾಬೀತಾಗಿದೆ.ಇದನ್ನುಉನ್ನತ ತನಿಖೆಗೆ ವಹಿಸದೆ ಸರ್ಕಾರ ಹಿಂದೇಟು ಹಾಕುತ್ತಾ ದಲಿತರಿಗೆ ಅನ್ಯಾಯವೆಸಗುತ್ತಿದೆ’ ಎಂದು ಟ್ವೀಟ್ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಜಾತಿವಾರು ನಿಗಮಗಳಲ್ಲಿ ಹೆಚ್ಚಿದ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.</p>.<p>‘ಬಡವರ ಹಣ: ಬಲಾಢ್ಯರ ಕಲ್ಯಾಣ’ ಎಂಬ ‘ಪ್ರಜಾವಾಣಿ’ ಒಳನೋಟ ವರದಿಯನ್ನು ಉಲ್ಲೇಖಿಸಿ ಕಾಂಗ್ರೆಸ್ ಟ್ವೀಟ್ ಮಾಡಿದೆ.</p>.<p>‘ಬಿಜೆಪಿ ಸರ್ಕಾರದಲ್ಲಿ ಶೇ 40 ಕಮಿಷನ್ ಭ್ರಷ್ಟಾಚಾರದ ಸೋಂಕು ಕೋವಿಡ್ಗಿಂತಲೂ ಅಪಾಯಕಾರಿಯಾಗಿ ವ್ಯಾಪಿಸಿದೆ’ ಎಂದು ಕೆಪಿಸಿಸಿ ಹರಿಹಾಯ್ದಿದೆ.</p>.<p>‘ನಿಗಮ, ಮಂಡಳಿಗಳಲ್ಲಿ ಬಿಜೆಪಿ ಭ್ರಷ್ಟೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಬಡವರ, ಹಿಂದುಳಿದವರ ಏಳಿಗೆಯ ಬದಲು ಭ್ರಷ್ಟರ ಏಳಿಗೆಯಾಗುತ್ತಿದೆ. ಬಡವರನ್ನು ತಲುಪಬೇಕಾದ ನೂರಾರು ಕೋಟಿ ಅನುದಾನ ಬಿಜೆಪಿ ಭ್ರಷ್ಟರ ತಿಜೋರಿ ಸೇರುತ್ತಿದೆ’ ಎಂದು ವಾಗ್ದಾಳಿ ನಡೆಸಿದೆ.</p>.<p>ಸಮಾಜ ಕಲ್ಯಾಣ ಇಲಾಖೆ ಸ್ವಯಂ ಕಲ್ಯಾಣ ಇಲಾಖೆಯಾಗಿದೆ.ಗಂಗಾ ಕಲ್ಯಾಣದಲ್ಲಿ ಭ್ರಷ್ಟರ ಕಲ್ಯಾಣ ಆಗುತ್ತಿರುವುದರಲ್ಲಿ ಆಶ್ಚರ್ಯವಿಲ್ಲ.ಇಲಾಖಾ ತನಿಖೆಯಲ್ಲಿ ಮೇಲ್ನೋಟದಲ್ಲೇ ಹಗರಣ ಸಾಬೀತಾಗಿದೆ.ಇದನ್ನುಉನ್ನತ ತನಿಖೆಗೆ ವಹಿಸದೆ ಸರ್ಕಾರ ಹಿಂದೇಟು ಹಾಕುತ್ತಾ ದಲಿತರಿಗೆ ಅನ್ಯಾಯವೆಸಗುತ್ತಿದೆ’ ಎಂದು ಟ್ವೀಟ್ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>