ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಸಭೆ ಚುನಾವಣೆಗೆ ₹300 ಕೋಟಿ | ಬೆಳೆ ಹಾನಿಗೆ ₹758 ಕೋಟಿ

ಕಾರ್ನಾಡ್ ನಾಟಕ ಪ್ರದರ್ಶನಕ್ಕೆ ₹15 ಲಕ್ಷ
Last Updated 26 ಡಿಸೆಂಬರ್ 2022, 20:32 IST
ಅಕ್ಷರ ಗಾತ್ರ

ಬೆಳಗಾವಿ: ವಿಧಾನಸಭೆ ಚುನಾವಣೆಗೆ ₹300 ಕೋಟಿ, ಅತಿವೃಷ್ಟಿಯಿಂದ ಆಗಿರುವ ಬೆಳೆಹಾನಿಗೆ ಪರಿಹಾರ ಒದಗಿಸಲು ₹758.19 ಕೋಟಿ ಸೇರಿದಂತೆ ಹೆಚ್ಚುವರಿಯಾಗಿ ₹8 ಸಾವಿರ ಕೋಟಿ ವೆಚ್ಚ ಮಾಡಲು ಅನುಮೋದನೆ ಪಡೆಯಲು ಎರಡನೇ ಪೂರಕ ಅಂದಾಜನ್ನು ವಿಧಾನಸಭೆಯಲ್ಲಿ ಸೋಮವಾರ ಮಂಡಿಸಲಾಯಿತು.

ದೇವಸ್ಥಾನ, ಸಮುದಾಯಗಳಿಗೆ ನೀಡಲಾಗುತ್ತಿರುವ ಅನುದಾನವನ್ನು ಪೂರಕ ಅಂದಾಜಿನಲ್ಲಿ ಒದಗಿಸಿಕೊಳ್ಳಲಾಗಿದೆ. ರಾಜ್ಯಪಾಲರು, ಮುಖ್ಯಮಂತ್ರಿ ಮತ್ತು ಸಚಿವರ ಅಧಿಕೃತ ಕಾರ್ಯಕ್ರಮಗಳಿಗೆ ಬಾಡಿಗೆ ಆಧಾರದ ಮೇಲೆ ಹೆಲಿಕಾಪ್ಟರ್/ ಏರ್ ಕ್ರಾಫ್ಟ್‌ ಬಿಲ್‌ಗಳನ್ನು ಪಾವತಿಸಲು ₹6 ಕೋಟಿಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.

ಚರ್ಮಗಂಟು ರೋಗದಿಂದ ಮೃತಪಟ್ಟ ರಾಸುಗಳ ಮಾಲೀಕರಿಗೆ ಪರಿಹಾರ ವಿತರಿಸಲು ₹30 ಕೋಟಿ ಹೆಚ್ಚುವರಿಯಾಗಿ ಕೊಡಲಾಗಿದೆ.

lಅತಿವೃಷ್ಟಿಯಿಂದ ಮೂಲಸೌಕರ್ಯಕ್ಕೆ ಆಗಿರುವ ಹಾನಿ ಸರಿಪಡಿಸಲು ₹124.50 ಕೋಟಿ ಹಾಗೂ ಕೊಡಗು ಜಿಲ್ಲೆಯಲ್ಲಿ ಮೂಲಸೌಕರ್ಯಕ್ಕೆ ಆಗಿರುವ ಸರಿಪಡಿಸಲು ನಡೆಸಿದ ಕಾಮಗಾರಿಗಳ ಬಾಕಿ ಬಿಲ್‌ಗಳ ಪಾವತಿಗೆ ಬೇಕಾದ ₹13.58 ಕೋಟಿ ಸೇರಿದಂತೆ ಒಟ್ಟು ₹638.08 ಕೋಟಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT