‘ಎಲ್ಲಿ ಬೇಕೆಂದರಲ್ಲಿ ಶಾಲೆಗಳು ನಾಯಿಕೊಡೆಗಳಂತೆ ತಲೆ ಎತ್ತುತ್ತಿರುವ ಇಂದಿನ ದಿನಮಾನಗಳಲ್ಲಿ ಒಂದನೇ ತರಗತಿಯಿಂದ 9ನೇ ತರಗತಿಯವರೆಗಿನ ಮಕ್ಕಳ ಬುದ್ಧಿವಂತಿಕೆ ತಪಾಸಣೆ, ಅಧ್ಯಯನದ ಗುಣಮಟ್ಟದಲ್ಲಿ ಸಮತೋಲನದ ಅಗತ್ಯವಿದೆ. ಹಾಗೆಯೇ, ಪರೀಕ್ಷಾ ಮೌಲ್ಯಮಾಪನದ ವಿಧಾನ ಮತ್ತು ಶಾಲೆಗಳ ಬೋಧನಾ ಸಿಬ್ಬಂದಿಯ ಮೌಲ್ಯಮಾಪನವು ಅವಶ್ಯವಿದೆ’ ಎಂದು ನ್ಯಾಯಪೀಠ ಹೇಳಿದೆ.