ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ ಸೋಲಿಸಲು ಉತ್ತರಕುಮಾರನ ಖೆಡ್ಡಾ: ಡಾ‌.ಸುಧಾಕರ್‌

Last Updated 21 ಜುಲೈ 2022, 13:36 IST
ಅಕ್ಷರ ಗಾತ್ರ

ಕೋಲಾರ: ‘ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಕೋಲಾರ ಕ್ಷೇತ್ರದಲ್ಲಿ ಉತ್ತರಕುಮಾರನ ತಂಡ ಖೆಡ್ಡಾ ತೋಡುತ್ತಿದೆ. ಆ ಖೆಡ್ಡಾಕ್ಕೆ ಸಿದ್ದರಾಮಯ್ಯ ಬೀಳಬಾರದೆಂದು ಅವರ ಅಭಿಮಾನಿಯಾಗಿ ಕೇಳಿಕೊಳ್ಳುತ್ತಿದ್ದೇನೆ’ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.

ಬಿಜೆಪಿಯ ಸಾಧನಾ ಸಮಾವೇಶದ ಪೂರ್ವಭಾವಿಯಾಗಿ ಗುರುವಾರ ಇಲ್ಲಿ ನಡೆದ ಕೋಲಾರ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

‘ನಾನು ಸಿದ್ದರಾಮಯ್ಯ ಅವರನ್ನು ಬಹಳ ಹತ್ತಿರದಿಂದ ನೋಡಿದ್ದೇನೆ. ಉತ್ತರ ಕುಮಾರನಂಥ ನೂರು ಜನ ಹೋಗಿ ಆಹ್ವಾನಿಸಿದರೂ ಅವರು ಕೋಲಾರ ಕ್ಷೇತ್ರಕ್ಕೆ ಬರುವುದಿಲ್ಲ. ಆದರೆ, ಮಂತ್ರಿ ಆಗುವ ಮುನ್ನ ಸಿದ್ದರಾಮಯ್ಯ ವಿರುದ್ಧ ಈ ಉತ್ತರಕುಮಾರ ಏನೆಲ್ಲಾ ಮಾತನಾಡಿದ್ದರು ಎಂಬುದು ನನಗೆ ಗೊತ್ತು’ ಎಂದು ಅವರು ಶಾಸಕ ಕೆ.ಆರ್‌.ರಮೇಶ್‌ ಕುಮಾರ್‌ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

‘ಶ್ರೀನಿವಾಸಪುರದಲ್ಲಿ ಸೋಲಿನ ಆತಂಕ ಎದುರಾಗಿದೆ ಎಂಬ ವಿಚಾರ ಸ್ಪಷ್ಟವಾಗಿದೆ. ಹೀಗಾಗಿ, ಸಿದ್ದರಾಮಯ್ಯ ಹೆಸರಿನಲ್ಲಿ ಗೆಲ್ಲಲು ವೇದಿಕೆ ಸಿದ್ಧ ಮಾಡಿಕೊಳ್ಳುತ್ತಿದ್ದಾರೆ. ಆದರೆ, ಆ ಕ್ಷೇತ್ರದಲ್ಲಿ ಉತ್ತರಕುಮಾರನ ಸೋಲು ಖಚಿತ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT