ವರಾಳೆ ಅವರನ್ನು ಸನ್ಮಾನಿಸಿ ಮಾತನಾಡಿದ ಸಂಘದ ಅಧ್ಯಕ್ಷ, ಹಿರಿಯ ವಕೀಲ ವಿವೇಕ ಸುಬ್ಬಾರೆಡ್ಡಿ, ‘ಕರ್ನಾಟಕ–
ಮಹಾರಾಷ್ಟ್ರ ನಡುವೆ ಗಡಿ ಎಂಬುದಿಲ್ಲ. ಅಷ್ಟೊಂದು ಸೌಹಾರ್ದ ಸಂಬಂಧ ಎರಡೂ ರಾಜ್ಯಗಳ ಜೊತೆ ಇದೆ. ಈ ಹಿಂದಿನ ಅತ್ಯುತ್ತಮ ಮುಖ್ಯ ನ್ಯಾಯಮೂರ್ತಿಗಳಂತೆಯೇ ವರಾಳೆ ಅವರೂ ತಮ್ಮದೇ ಆದ ಛಾಪು ಮೂಡಿಸಲಿ ಎಂದು ಸಂಘ ಬಯಸುತ್ತದೆ’ ಎಂದರು.