ಈ ಕುರಿತಂತೆ ವಿಶ್ವವಿದ್ಯಾಲಯ ಸಲ್ಲಿಸಿದ್ದ ಮೇಲ್ಮನವಿಯನ್ನು ಧಾರವಾಡ ಪೀಠದಲ್ಲಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಸ್.ಜಿ ಪಂಡಿತ್ ಹಾಗೂ ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ಧ ವಿಭಾಗೀಯ ನ್ಯಾಯಪೀಠ ಈ ಕುರಿತ ತೀರ್ಪು ಪ್ರಕಟಿಸಿದೆ. ‘ಪರೀಕ್ಷೆಯನ್ನು ಹೇಗೆ ನಡೆಸಬೇಕು ಎಂಬ ಬಗ್ಗೆ ವಿಶ್ವವಿದ್ಯಾಲಯ 10 ದಿನಗಳಲ್ಲಿ ನಿರ್ಧರಿಸಿ, 3 ವರ್ಷದ ಎಲ್ಎಲ್ಬಿಯ 2 ಮತ್ತು 4ನೇ ಸೆಮಿಸ್ಟರ್ಗಳಿಗೆ ಪರೀಕ್ಷೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು‘ ಎಂದು ನ್ಯಾಯಪೀಠ ನಿರ್ದೇಶಿಸಿದೆ.