ಬೆಂಗಳೂರು: ‘ಹಿಜಾಬ್ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯದಾದ್ಯಂತ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಅಶಾಂತಿ ಸೃಷ್ಟಿಗೆ ಮುಂದಾಗಬಾರದು. ಈ ರಾಜ್ಯದ ಜನರು ಮತ್ತು ವಿದ್ಯಾರ್ಥಿಗಳು ಒಳ್ಳೆಯವರಿದ್ದಾರೆ. ಆದರೆ, ಕೆಲವೇ ಕೆಲವು ದುರುಳರಿಂದ ಅಶಾಂತಿ ಸೃಷ್ಟಿಸುವ ಪ್ರಯತ್ನ ನಡೆಯುತ್ತಿದೆ. ಆದ್ದರಿಂದ, ರಾಜ್ಯ ಸರ್ಕಾರ ಶಾಂತಿ ಮತ್ತು ಕಾನೂನು ಪಾಲನೆ ಹೊಣೆಯನ್ನು ಸಮರ್ಥವಾಗಿ ನಿಭಾಯಿಸುವ ಅಗತ್ಯವಿದೆ’ ಎಂದು ಹೈಕೋರ್ಟ್ ಪ್ರತಿಪಾದಿಸಿದೆ.