ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರೊಬೇಷನರಿ ಅವಧಿಯಲ್ಲಿ ಆರೋಪ ಬಂದರೆ ಏಕಾಏಕಿ ವಜಾ ಸಲ್ಲ: ಹೈಕೋರ್ಟ್

Last Updated 12 ಫೆಬ್ರುವರಿ 2022, 20:49 IST
ಅಕ್ಷರ ಗಾತ್ರ

ಬೆಂಗಳೂರು: ‘ಪ್ರೊಬೇಷನರಿ ಅವಧಿಯಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿ ವಿರುದ್ಧ ದುರ್ನಡತೆ ಆರೋಪ ಬಂದರೆ ತನಿಖೆ ನಡೆಸದೆ ಅವರನ್ನು ಏಕಾಏಕಿ ವಜಾ ಮಾಡುವಂತಿಲ್ಲ’ ಎಂದು ಹೈಕೋರ್ಟ್ ಆದೇಶ ನೀಡಿದೆ.

ಈ ಕುರಿತಂತೆ ರಮೇಶ್ ಮಲ್ಲಿ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಪೀಠದಲ್ಲಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಜಿ.ಪಂಡಿತ್ ಮತ್ತು ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಕರ್ನಾಟಕ ಆಡಳಿತ ನ್ಯಾಯಮಂಡಳಿ (ಕೆಎಟಿ) ಆದೇಶವನ್ನೂ ನ್ಯಾಯಾಲಯ ಇದೇ ವೇಳೆ ರದ್ದುಗೊಳಿಸಿದೆ.

‘ನಿಯಮದ ಪ್ರಕಾರ ಪೊಬೇಷನರಿ ಅವಧಿಯಲ್ಲಿ ಅರ್ಜಿದಾರರನ್ನು ವಜಾಗೊಳಿಸುವ ಅಧಿಕಾರ ಇದೆ. ಆದರೆ, ಈ ರೀತಿ ಸಿಬ್ಬಂದಿ ವಿರುದ್ಧ ದೂರುಗಳು ಬಂದಾಗ ಕರ್ನಾಟಕ ನಾಗರಿಕ ಸೇವೆಗಳು (ಪ್ರೊಬೇಷನ್ ) ನಿಯಮ 1977 ಕಾಯ್ದೆಯ ಸೆಕ್ಷನ್‌ 5ರ ಪ್ರಕಾರ ತನಿಖೆ ನಡೆಸುವುದು ಅಗತ್ಯ. ತನಿಖೆ ನಡೆಸದೆಯೇ ಏಕಾಏಕಿ ಸೇವೆಯಿಂದ ವಜಾ ಮಾಡಬಾರದು’ ಎಂದು ನ್ಯಾಯಪೀಠವು ಆದೇಶದಲ್ಲಿ ವಿವರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT