ಇ-ಫೈಲಿಂಗ್ ಮತ್ತು ಲೈವ್ ಸ್ಟ್ರೀಮಿಂಗ್ಗೆ ಸಂಬಂಧಿಸಿದಂತೆ ವಕೀಲ ದಿಲ್ರಾಜ್ ರೋಹಿತ್ ಸಿಕ್ವೇರಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. ‘ನಿಯಮಗಳಿಗೆ ಸಂಬಂಧಿಸಿದಂತೆ ತಕ್ಷಣವೇ ಅಧಿಸೂಚನೆ ಹೊರಡಿಸಿ ಒಂದು ವಾರದಲ್ಲಿ ಅಧಿಕೃತ ಗೆಜೆಟ್ನಲ್ಲಿ ಪ್ರಕಟಿಸಿ’ ಎಂದು ರಾಜ್ಯ ಸರ್ಕಾರಕ್ಕೆ ನ್ಯಾಯಪೀಠವು ನಿರ್ದೇಶಿಸಿದೆ.