ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಶ್ರೀನಿವಾಸ ರಾವ್,‘ಇದೊಂದು ಪರಿಗಣನೆಗೆ ಅರ್ಹವಲ್ಲದ ಪ್ರಕರಣ. ಆದರೂ, ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಇದೇ 6ರಂದು ಅರ್ಜಿದಾರರ ಖುದ್ದು ಹಾಜರಾತಿಗೆ ಸಮನ್ಸ್ ಜಾರಿಗೊಳಿಸಿದೆ. ಪೊಲೀಸರು ಮತ್ತುಮ್ಯಾಜಿಸ್ಟ್ರೇಟ್ ಕೋರ್ಟ್ ನಿಯಮ ಪಾಲನೆ ಮಾಡಿಲ್ಲ. ಆದ್ದರಿಂದ, ಸಮನ್ಸ್ ಜಾರಿಗೆ ಮಧ್ಯಂತರ ತಡೆ ನೀಡಬೇಕು. ನಿಯಮ ಪಾಲನೆ ಮಾಡದೆ ಇರುವುದರಿಂದ ಪ್ರಕರಣ ರದ್ದುಗೊಳಿಸಬೇಕು’ ಎಂದು ಕೋರಿದರು.